ಬೆಂಗಳೂರು: ನಟ ದರ್ಶನ್ ಗ್ಯಾಂಗ್ನಿಂದ ಹತ್ಯೆಯಾಗಿದ್ದಾನೆನ್ನಲಾದ ರೇಣುಕಾಸ್ವಾಮಿಯ ಮೊಬೈಲ್ ಆತ ಸಾವಿಗೀಡಾಗಿ 10 ದಿನ ಕಳೆದರೂ ಇನ್ನೂ ಸಿಕ್ಕಿಲ್ಲ. ಹೀಗಾಗಿ ಸ್ಥಳ ಮಹಜರು ಮಾಡಲು ಪೊಲೀಸರು ಆರೋಪಿಯನ್ನು ಮತ್ತೆ ಕರೆ ತಂದಿದ್ದಾರೆ.
ಮೊಬೈಲ್ ಪ್ರಮುಖ ಸಾಕ್ಷ್ಯವಾಗಿರುವ ಕಾರಣ ಪೊಲೀಸರು ಎಲ್ಲಾ ಕಡೆ ಆತನ ಮೊಬೈಲ್ಗಾಗಿ ಹುಡುಕಾಡಿದ್ದಾರೆ. ಎಲ್ಲಿಯೂ ಮೊಬೈಲ್ ಸಿಗದ ಕಾರಣ ಪೊಲೀಸರು ಕೊನೆಯ ಬಾರಿಗೆ ಸಿಗ್ನಲ್ ಇದ್ದ ಜಾಗದಲ್ಲಿ ಹುಡುಕಾಟ ನಡೆಸಿದ್ದಾರೆ. ರಾಜಕಾಲುವೆಯಿದ್ದ ಜಾಗದಲ್ಲೇ ಅವರ ಮೊಬೈಲ್ ಕೊನೆಯ ಬಾರಿಗೆ ಸಿಗ್ನಲ್ ತೋರಿಸಿದೆ.
ಹೀಗಾಗಿ ಆರೋಪಿ ಪ್ರದೂಶ್ನನ್ನು ಮತ್ತೆ ಸುಮನಹಳ್ಳಿ ಸತ್ವ ಅಪಾರ್ಟ್ಮೆಂಟ್ ಮುಂಭಾಗದಲ್ಲಿರುವ ರಾಜಕಾಲುವೆ ಬಳಿ ಶವ ಎಸೆದಿದ್ದ ಜಾಗಕ್ಕೆ ಕರೆ ತಂದಿದ್ದಾರೆ. ಆದರೆ ಮೊಬೈಲ್ ಪತ್ತೆಯಾಗದ ಹಿನ್ನೆಲೆಯಲ್ಲಿ ಸಿಬ್ಬಂದಿ ಅಲ್ಲಿಂದ ಹಿಂದಿರುಗಿದ್ದಾರೆ ಎನ್ನಲಾಗಿದೆ.
ರೇಣುಕಾಸ್ವಾಮಿ ಮೊಬೈಲ್ ಹುಡುಕಾಟ: ಪೊಲೀಸರಿಂದ ಮತ್ತೊಮ್ಮೆ ಮಹಜರು
RELATED ARTICLES