Wednesday, January 15, 2025
Homeದಾವಣಗೆರೆಕಲಾಕುಂಚದಿಂದ “ಸಂಕ್ರಾಂತಿ ಕಾವ್ಯ ಸಂಭ್ರಮ” ರಾಜ್ಯ ಮಟ್ಟದ ಉಚಿತ ಸ್ಪರ್ಧೆ

ಕಲಾಕುಂಚದಿಂದ “ಸಂಕ್ರಾಂತಿ ಕಾವ್ಯ ಸಂಭ್ರಮ” ರಾಜ್ಯ ಮಟ್ಟದ ಉಚಿತ ಸ್ಪರ್ಧೆ


ದಾವಣಗೆರೆ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಸಂಕ್ರಾಂತಿ ಹಬ್ಬದ ಪ್ರಯುಕ್ತ ರಾಜ್ಯ ಮಟ್ಟದ “ಸಂಕ್ರಾಂತಿ ಕಾವ್ಯ ಸಂಭ್ರಮ” ಉಚಿತ ಕವನ ಬರೆಯುವ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ತೀರ್ಪುಗಾರರಲ್ಲಿ ಒಬ್ಬರಾದ ಕವಯತ್ರಿ, ಸಾಹಿತಿ ಶ್ರೀಮತಿ ಅನ್ನಪೂರ್ಣ ಪಾಟೀಲ್ ತಿಳಿಸಿದ್ದಾರೆ.
ಸಂಕ್ರಾಂತಿ ಕುರಿತಂತೆ 15 ರಿಂದ 20 ಸಾಲುಗಳ ಕವನ ಬರೆದು ಕೆಳಗಿನ ವ್ಯಾಟ್ಸಪ್ ಸಂಖ್ಯೆಗೆ 31-12-2024ರೊಳಗೆ ಕನ್ನಡದಲ್ಲಿ ತಮ್ಮ ವಿಳಾಸ ವ್ಯಾಟ್ಸಪ್ ಸಂಖ್ಯೆಯೊAದಿಗೆ ಕಳಿಸಬೇಕು ಆಂಗ್ಲ ಭಾಷೆಯಲ್ಲಿ ವಿಳಾಸ ಕಳಿಸಿದರೆ ಸ್ವೀಕರಿಸುವುದಿಲ್ಲ. ಯಾವುದೇ ಸಭೆ, ಸಮಾರಂಭ ಇರುವುದಿಲ್ಲ ಬಹುಮಾನ ವಿಜೇತರಿಗೆ ಮಾತ್ರ ಫಲಿತಾಂಶ ಅಭಿನಂದನಾ ಪತ್ರ ಸ್ಪರ್ಧಿಗಳು ಕೊಟ್ಟ ವ್ಯಾಟ್ಸಪ್ ಸಂಖ್ಯೆಗೆ ಕಳಿಸಲಾಗುವುದು ಎಂದು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಿಸಿದ್ದಾರೆ. ಕವನ ರಚಿಸಿ ಕಳಿಸುವ ವ್ಯಾಟ್ಸಪ್ ಸಂಖ್ಯೆ 9481909864

RELATED ARTICLES
- Advertisment -
Google search engine

Most Popular