ಸೆ. 8: ಮೂಡುಬಿದಿರೆಯಲ್ಲಿ ಪ್ರಿಯದರ್ಶಿನಿ ಸೊಸೈಟಿಯ 4ನೇ ನೂತನ ಶಾಖೆ ಉದ್ಘಾಟನೆ

0
29

ಮೂಡುಬಿದಿರೆ: ಮೂಲ್ಕಿ ತಾಲೂಕಿನ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿ, ಹಳೆಯಂಗಡಿ, ಪಡುಬಿದ್ರೆ, ಕಿನ್ನಿಗೋಳಿಯಲ್ಲಿ 3 ಶಾಖೆಯನ್ನು ನಡೆಸುತ್ತಿರುವ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ 4ನೇ ಶಾಖೆಯು ಇದೀಗ ಮೂಡುಬಿದಿರೆಯಲ್ಲಿ ತಾಲೂಕಿನ ಪ್ರಾಂತ್ಯ, ಜ್ಯೋತಿನಗರ, ಮೆಸ್ಕಾಂ ಕಚೇರಿ ಎದುರುಗಡೆ ಮಹಾಲಸ ಕಟ್ಟಡದಲ್ಲಿ ದಿನಾಂಕ 08-09-2025 ರಂದು ಉದ್ಘಾಟನೆಗೊಳ್ಳಲಿದೆ ಎಂದು ಸೊಸೈಟಿಯ ಅಧ್ಯಕ್ಷರಾದ ಎಚ್. ವಸಂತ್ ಬೆರ್ನಾರ್ಡ್ ರವರು ತಿಳಿಸಿದ್ದಾರೆ.

ರೂ. 351.69 ಕೋಟಿ ವಹಿವಾಟು

ಅವರು ಇಂದು ಮೂಡುಬಿದಿರೆಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಸೊಸೈಟಿಯು 2021 ರಲ್ಲಿ ಪ್ರಾರಂಭಗೊಂಡು, ಪ್ರಸ್ತುತ 32 ಕೋಟಿ ನಿರಖು ಠೇವಣಿ ಹೊಂದಿದೆ. 2024-25ನೇ ಸಾಲಿನಲ್ಲಿ ರೂ. 351.69 ಕೋಟಿ ವಹಿವಾಟು ನಡೆಸಿ, ಉತ್ತಮ ದರ್ಜೆಯ ವ್ಯವಹಾರ ಮಾಡಿ ರೂ. 41.88 ಲಕ್ಷ ಲಾಭವನ್ನು ಗಳಿಸಿರುತ್ತದೆ. ಹಾಗೂ ಶೇ. 98.5 ಸಾಲ ವಸೂಲಾತಿ ನಡೆಸಿ ಲೆಕ್ಕಪರಿಶೋಧನಾ ವರದಿ (ಆಡಿಟ್ ವರದಿ) ಕೂಡಾ “ಎ” ಶ್ರೇಣಿಯಲ್ಲಿದ್ದು, ಹೆಮ್ಮೆ ಪಡುವಂತಾಗಿದೆ. ಸೊಸೈಟಿಯ 3 ಶಾಖೆಗಳಲ್ಲೂ ಇ-ಮುದ್ರಾಂಕ ವ್ಯವಸ್ಥೆ, ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ, ಹವಾನಿಯಂತ್ರಿತ ಬ್ಯಾಂಕಿಂಗ್ ವಿಭಾಗವನ್ನು ಹೊಂದಿರುತ್ತದೆ. ಪ್ರಸ್ತುತ ಒಟ್ಟು 3843 ಸದಸ್ಯರನ್ನು ಹೊಂದಿರುತ್ತದೆ. ಸಂಘದಲ್ಲಿ 21 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಹಾಗೂ ಒಟ್ಟು 17 ನಿರ್ದೇಶಕರ ತಂಡ ಇದೆ. ಇವರೆಲ್ಲರ ಶ್ರಮದಿಂದಲೇ 2023-24 ಮತ್ತು 2024-25ನೇ ಸಾಲಿನಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ವಿಶಿಷ್ಟ ಸಾಧನ ಪ್ರಶಸ್ತಿ ದೊರಕಿರುತ್ತದೆ ಎಂದರು.

4ನೇ ನೂತನ ಶಾಖೆ ಮೂಡುಬಿದಿರೆಯಲ್ಲಿ

ಪ್ರಸ್ತುತ ಮೂಡಬಿದಿರೆಯಲ್ಲಿ 4ನೇ ಶಾಖೆಯನ್ನು ತೆರೆಯುತ್ತಿದ್ದು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷರಾದ ಡಾ|| ಎಂ. ಎನ್. ರಾಜೇಂದ್ರ ಕುಮಾರ್ ಇವರು ಉದ್ಘಾಟಣೆಗೈಯಲಿದ್ದಾರೆ. ಮುಲ್ಕಿ ಸೀಮೆ ಅರಸರು, ಮುಖ್ಯ ಅರಮನೆ ಎಂ. ದುಗ್ಗಣ್ಣ ಸಾವಂತರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್ ದೀಪ ಪ್ರಜ್ವಲನೆಯನ್ನು‌, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ ಅವರು ಕಂಪ್ಯೂಟ‌ರ್ ವ್ಯವಸ್ಥೆ ಚಾಲನೆಯನ್ನು, ಆಳ್ವಾಸ್ ಎಜುಕೇಶನ್ ಟ್ರಸ್ಟ್ (ರಿ.) ಅಧ್ಯಕ್ಷರಾದ ಡಾ|| ಎಮ್. ಮೋಹನ್ ಆಳ್ವ ರವರು ಭದ್ರತಾ ಕೊಠಡಿ ಉದ್ಘಾಟನೆಯನ್ನು, ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಒಕ್ಕೂಟ (KMF) ಇದರ ನಿರ್ದೇಶಕರಾದ ಡಾ|| ಐಕಳ ದೇವಿ ಪ್ರಸಾದ್ ಶೆಟ್ಟಿಯವರು ಅಮೃತ ನಗದು ಪತ್ರ ಠೇವಣಿ ಬಿಡುಗಡೆಯನ್ನು, ಚೌಟರ ಅರಮನೆ ಮೂಡುಬಿದಿರೆಯ ಕುಲದೀಪ್ ಎಮ್. ರವರು ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ ಎಂದರು.

ಮೂಡುಬಿದಿರೆ ವಲಯದ ಪ್ರಧಾನ ಧರ್ಮಗುರು ರೇ. ಫಾ. ಓನಿಲ್ ಡಿ’ಸೋಜಾ ಉಳಿತಾಯ ಖಾತೆಯ ಪಾಸ್‌ಬುಕ್ ವಿತರಣೆ, ಸಿಎಸ್‌ಐ ಕ್ರಿಸ್ತ ಕಾಂತಿ ಚರ್ಚ್ ಮೂಡುಬಿದಿರೆ ಇದರ ಸಭಾಪಾಲಕ ರೇ. ಸಂತೋಷ್ ಕುಮಾರ್ ರವರು ಮಾಸಿಕ ಠೇವಣಿ ಪತ್ರ ಬಿಡುಗಡೆ, ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪಾವಂಜೆ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಐ. ಸೂರ ಕುಮಾರ್ ರವರು ಪ್ರಥಮ ವಾಹನ ಸಾಲ ವಿತರಣೆಯನ್ನು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿ. ಪಡೀಲ್ ಮಂಗಳೂರು ಇದರ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ಅವರು ನಿತ್ಯನಿಧಿ ವಾಸ್‌ಬುಕ್ ವಿತರಣೆಯನ್ನು ಹಾಗೂ ಮೂಡಬಿದ್ರೆಯ ನ್ಯಾಯಾವಾದಿ ಶರತ್ ಡಿ. ಶೆಟ್ಟಿ ರವರು ಪ್ರಿಯದರ್ಶಿನಿ ಸ್ವ-ಸಹಾಯ ಗುಂಪಿಗೆ ಚಾಲನೆಯನ್ನು ಗೈಯಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್. ಎನ್. ರಮೇಶ್‌, ಮೂಡುಬಿದಿರೆ ನಗರ ಯೋಜನಾ ಪ್ರಾಧಿಕಾರ ಇದರ ಅಧ್ಯಕ್ಷ ಹರ್ಷವರ್ಧನ್ ಪಡಿವಾಳ್, ಶಿರ್ತಾಡಿ ಸಹಕಾರಿ ವ್ಯವಸಾಯಿಕ ಸಂಘ ಇದರ ಅಧ್ಯಕ್ಷ ಪ್ರವೀಣ್ ಕುಮಾರ್ ಜೈನ್‌ರವರು, ದೇವಾಡಿಗ ಸುಧಾರಕ ಸೇವಾ ಸಂಘ (ರಿ) ಮೂಡಬಿದ್ರೆ ಇದರ ಅಧ್ಯಕ್ಷ ಪುರಂದರ ದೇವಾಡಿಗ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಪುಚ್ಚೆಮೊಗರು ಇರುವೈಲು ಇದರ ಅಧ್ಯಕ್ಷ ಕುಮಾರ್ ಪೂಜಾರಿ, Region 10, Zone 2 ಲಯನ್ಸ್ ಕ್ಲಬ್ 317D ಇದರ ವಲಯ ಅಧ್ಯಕ್ಷ ಹೊಸ್ಸಿ ಮೆನೇಜರ್, ಪುರಸಭೆ ಸದಸ್ಯರಾದ ಇಕ್ಯಾಲ್ ಕರೀಂ, ಕಟ್ಟಡ ಮಾಲೀಕ ದೇವದಾಸ್ ಭಟ್ ರವರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿ ಮೂಡುಬಿದಿರೆ ಜನತೆಯ ಸಹಕಾರ ಯಾಚಿಸಿದರು. ಪತ್ರಿಕಾ ಗೋಷ್ಠಿಯಲ್ಲಿ ಸೊಸೈಟಿಯ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ನಿರ್ದೇಶಕರಾದ ಗಣೇಶ್ ಕುಮಾರ್ ದೇವಾಡಿಗ, ಗೌತಮ್ ಜೈನ್, ತನುಜಾ ಶೆಟ್ಟಿ , ನವೀನ್ ಸಾಲಿಯಾನ್ ಪಂಜ, ಲೆಕ್ಕಿಗರಾದ ಲೋಲಾಕ್ಷಿ  ಮೂಡುಬಿದಿರೆ ಶಾಖಾ ಪ್ರಬಂಧಕಿ ಅಭಿಷ್ಠಾ ಜೈನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here