ಸೇವಾಭಾರತಿ ಕನ್ಯಾಡಿ ಹೊಸ ವಿಶ್ವಸ್ಥ ಮಂಡಳಿ ರಚನೆ – ಅಧ್ಯಕ್ಷರಾಗಿ ಕೆ ವಿನಾಯಕ ರಾವ್ ಕನ್ಯಾಡಿ

0
8

ಸೌತಡ್ಕ : 2026 ರಿಂದ 2029ರ ಅವಧಿಗೆ ಹೊಸ ವಿಶ್ವಸ್ಥ ಮಂಡಳಿ ರಚನೆಯ ಕಾರ್ಯಕ್ರಮವನ್ನು ಫೆಬ್ರವರಿ 17, ಮಂಗಳವಾರದಂದು ಸೌತಡ್ಕದಲ್ಲಿರುವ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರದಲ್ಲಿ ಸರಳವಾಗಿ ನಡೆಸಲಾಯಿತು.

ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶ್ರೀ ಕೆ. ವಿನಾಯಕ ರಾವ್ ರವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಶ್ರೀ ಬಾಲಕೃಷ್ಣ, ಕೋಶಾಧಿಕಾರಿಯಾಗಿ ಶ್ರೀ ಜೈ ರಾಜ್ ಸಾಲ್ಯಾನ್ ಕಾನರ್ಪ, ಕಾರ್ಯದರ್ಶಿಯಾಗಿ ಶ್ರೀ ವಿಷ್ಣು ಪ್ರಸಾದ್ ತೆಂಕಿಲ್ಲಾಯ ಹಾಗೂ ಟ್ರಸ್ಟಿಗಳಾಗಿ ಶ್ರೀಮತಿ ಸ್ವರ್ಣಗೌರಿ, ಶ್ರೀ ಗಿರೀಶ್ ರಾವ್ ಕೆ.ಯು., ಮತ್ತು ಶ್ರೀ ಪೃಥ್ವೀಶ ಆಯ್ಕೆಯಾಗಿದ್ದಾರೆ.

ಕಾರ್ಯಕ್ರಮದ ವೇಳೆ ಅಧ್ಯಕ್ಷರಾದ ಶ್ರೀಮತಿ ಸ್ವರ್ಣಗೌರಿಯವರು ಕಳೆದ ಮೂರು ವರ್ಷಗಳ ಸೇವಾ ಪಯಣದ ಅನುಭವವನ್ನು ಹಂಚಿಕೊಂಡರು. ಹೊಸದಾಗಿ ರಚನೆಯಾದ ವಿಶ್ವಸ್ಥ ಮಂಡಳಿ ಸದಸ್ಯರಿಗೆ ID ಕಾರ್ಡ್‌ಗಳನ್ನು ನೀಡುವ ಮೂಲಕ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಲಾಯಿತು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪಾರುಪತ್ಯಗಾರರಾದ ಶ್ರೀ ಲಕ್ಷ್ಮೀನಾರಾಯಣ ರಾವ್, ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಕೆ ಕೃಷ್ಣ ಭಟ್, ಸೇವಾಭಾರತಿ ಸಲಹಾ ಮಂಡಳಿ ಸದಸ್ಯರಾದ ಡಾ. ಜಯಕುಮಾರ್ ಶೆಟ್ಟಿ, ಸೇವಾಧಾಮ ಸಂಚಾಲಕರಾದ ಶ್ರೀ ಕೆ. ಪುರಂದರ ರಾವ್, ಹಾಗೂ ನಿಕಟಪೂರ್ವ ಟ್ರಸ್ಟಿಗಳು ಉಪಸ್ಥಿತರಿದ್ದರು.

ಇದೇ ವೇಳೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಸಂಸ್ಥೆಯ ಹಿತೈಷಿ ಹಾಗೂ ದಾನಿಯಾದ ಬೆನ್ನುಹುರಿ ಅಪಘಾತಕ್ಕೊಳಗಾದ ಶ್ರೀ ಮಧ್ವಮೂರ್ತಿ ಅವರ ಸ್ಮರಣಾರ್ಥವಾಗಿ ನುಡಿನಮನ ಸಲ್ಲಿಸಲಾಯಿತು. .

LEAVE A REPLY

Please enter your comment!
Please enter your name here