ಕರ್ನಾಟಕ ಪಬ್ಲಿಕ್ ಸ್ಕೂಲ್ ಹಾಸನ ಇಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆಯನ್ನು ಮಾಡಿರುತ್ತಾರೆ. ಪ್ರಥಮ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ ೪್ಠ೪೦೦ ಮೀಟರ್ ರಿಲೇಯಲ್ಲಿ ಚಿನ್ನದ ಪದಕ, ದ್ವಿತೀಯ ವಿಜ್ಞಾನ ವಿಭಾಗದ ಸಮೃದ್ಧಿ ಜೆ ಶೆಟ್ಟಿ ೧೦೦ ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿ ಪದಕ ಪಡೆದು, ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯ (SಉಈI) ವತಿಯಿಂದ ಹರಿಯಾಣದ ಭೀವಾನಿ (ಃhiತಿಚಿಟಿi) ಇಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ದ್ವಿತೀಯ ವಿಜ್ಞಾನ ವಿಭಾಗದ ಸಚಿತ್ ಪಿ ಕೆ ೪೦೦ ಮೀಟರ್ ಹರ್ಡಲ್ಸ್ ನಲ್ಲಿ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಯಶ್ವಿತ್ ಹೈಜಂಪ್ ನಲ್ಲಿ ಕಂಚಿನ ಪದಕ ಗಳಿಸಿರುತ್ತಾರೆ.
ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನ ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
Phoಣos – SಉಈIಗೆಆಯ್ಕೆಯಾದವಿದ್ಯರ್ಥಿಗಳು
ಡಿಂಪಲ್ ಶೆಟ್ಟಿ
ಸಮೃದ್ಧಿ ಜೆ ಶೆಟ್ಟಿ
Phoಣos – ವಿದ್ಯಾಭಾರತಿರಾಷ್ಟ್ರಮಟ್ಟವನ್ನುಪ್ರತಿನಿಧಿಸಿಕಂಚಿನಪದಕಪಡೆದವರು
ಸಚಿತ್ ಪಿ ಕೆ
ಯಶ್ವಿತ್
