ಮುಂಬೈಯಲ್ಲಿ ಶೀರೂರು ಪರ್ಯಾಯ ಪೂರ್ವಭಾವಿ ಸಭೆ

0
159

ಉಡುಪಿ: ಶೀರೂರು ಮಠದ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಮುಂಬಯಿ ಸಾಂತಾಕ್ರೂಜ್​ ನಲ್ಲಿರುವ ಪೇಜಾವರ ಮಠದಲ್ಲಿ ಮಂಗಳವಾರ ಪೂರ್ವಭಾವಿ ಸಭೆ ನಡೆಯಿತು.
ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಶೀರೂರು ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಯಶ್​ ಪಾಲ್​ ಸುವರ್ಣ ಅಧ್ಯಕ್ಷತೆ ವಹಿಸಿ, ಶೀರೂರು ಮಠದ ಪರ್ಯಾಯ ಮಹೋತ್ಸವದ ಯಶಸ್ಸಿಗೆ ಕರ್ಮ ಭೂಮಿ ಮುಂಬಯಿಯಲ್ಲಿ ಬದುಕು ಕಟ್ಟಿಕೊಂಡಿರುವ ತುಳುನಾಡಿನ ಬಂಧುಗಳು ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.
ಸಭೆಯಲ್ಲಿ ಶ್ರೀಮಠದ ದಿವಾನರಾದ ಡಾ. ಉದಯ ಕುಮಾರ್​ ಸರಳತ್ತಾಯ, ಕಾಪು ಶಾಸಕ ಸುರೇಶ್​ ಶೆಟ್ಟಿ ಗುರ್ಮೆ, ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರ್​ ರತ್ನಾಕರ ಹೆಗ್ಡೆ, ಸಂಚಾಲಕ ಕೆ. ವಿಷ್ಣುಮೂರ್ತಿ ಆಚಾರ್ಯ, ಕಾರ್ಯದರ್ಶಿ ಮೋಹನ್​ ಭಟ್​ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here