ಶಿವಸೇವಾ ವೃಂದ ಕಿದೂರು ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಸಂಘದ ಕಚೇರಿಯಲ್ಲಿ ಜರಗಿತು.
ಹರಿಪ್ರಸಾದ್ ಇವರ ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಅಶೋಕ ಪುಣಿಯೂರು,
ಉಪಾಧ್ಯಕ್ಷರಾಗಿ ಚಂದ್ರಶೇಖರ ಮುಂಡ್ರೆಲ್, ಕಾರ್ಯದರ್ಶಿಯಾಗಿ ಧನಂಜಯ ಪಿ., ಜೊತೆ ಕಾರ್ಯದರ್ಶಿಯಾಗಿ ನಿತಿನ್ ಕುಮಾರ್, ಕೋಶಾಧಿಕಾರಿಯಾಗಿ ಧೀರಜ್ ಪಿ. ಹಾಗೂ ಹಲವು ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ರೂಪೇಶ್ ಸ್ವಾಗತಿಸಿ ಸದಾಶಿವ ರೈ ಧನ್ಯವಾದ ಸಮರ್ಪಿಸಿದರು.