ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಪ್ರತಿಷ್ಠಾ ವರ್ಧoತ್ಯುತ್ಸವ, ಅನ್ನ ಸಂತರ್ಪಣೆ ಹಾಗೂ 66ನೇ ಭಜನಾ ಮಂಗಲೋತ್ಸವವು ಜ.25ರಂದು ಭಜನಾ ಮಂದಿರದಲ್ಲಿ ನಡೆಯಿತು.
ಪ್ರತಿಷ್ಠಾ ವರ್ಧoತ್ಯುತ್ಸವವು ದಯಾಕರ ಶಾಂತಿ ಬನ್ನಂಜೆ ಅವರ ಪೌರೋಹಿತ್ಯದಲ್ಲಿ ನಡೆಯಿತು.
66ನೇ ಭಜನಾ ಮಂಗಲೋತ್ಸವಕ್ಕೆ ಸಂಘದ ಅಧ್ಯಕ್ಷ ಶಿವದಾಸ್ ಪಿ. ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಎ.ಮುದ್ದಣ್ಣ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ವಿನಯ್ ಕುಮಾರ್, ಗೌರವ ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಭಜನಾ ಸಹ ಸಂಚಾಲಕ ಶಂಕರ ಪೂಜಾರಿ, ಮಹಿಳಾ ಘಟಕದ ಗೌರವ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಚಾಲಕಿ ಗೋಧಾವರಿ ಎಮ್. ಸುವರ್ಣ, ಸಂಘದ ಆಡಳಿತ ಸಮಿತಿ ಸದಸ್ಯರಾದ ಸುಧಾಕರ್ ಎ., ರಮೇಶ್ ಕೋಟ್ಯಾನ್, ಕುಶಲ್ ಕುಮಾರ್ ಎ., ಲಕ್ಷ್ಮಣ ಪೂಜಾರಿ, ಗುರುರಾಜ್ ಪೂಜಾರಿ, ಸತೀಶ್ ಪೂಜಾರಿ, ಭಾಸ್ಕರ್ ಕೋಟ್ಯಾನ್, ನಿತಿನ್ ಕುಮಾರ್, ಭಾಸ್ಕರ ಅಂಚನ್, ಜನಾರ್ಧನ ಪೂಜಾರಿ, ಮಹಿಳಾ ಘಟಕದ ಸಹ ಸಂಚಾಲಕಿಯರಾದ ದೇವಕಿ ಕೆ. ಕೋಟ್ಯಾನ್, ವಿಜಯ ಕೃಷ್ಣ, ಕಾರ್ಯದರ್ಶಿ ವಾಣಿಶ್ರೀ ಅರುಣ್, ಸಂಘಟನಾ ಕಾರ್ಯದರ್ಶಿ ಪ್ರಭಾ ದಯಾನಂದ್, ಸಮಿತಿ ಸದಸ್ಯರಾದ ವಾಣಿ ಪ್ರಭಾಕರ್, ಜಯಂತಿ ಹರೀಶ್, ಪ್ರಮೀಳಾ ಭಾಸ್ಕರ್, ಜಯಂತಿ ನಾರಾಯಣ, ಅರ್ಚಕರಾದ ಅವಿನಾಶ್ ಪೂಜಾರಿ, ಜೀವನ್, ಅದಿತ್, ಆಯುಷ್, ಪ್ರಮುಖರಾದ ಸಂಜೀವ ಪೂಜಾರಿ, ಸುರೇಶ್ ಎ., ಮೀನಾಕ್ಷಿ ಗೋಪಾಲ್ ಪೂಜಾರಿ, ರವಿ ಪಾಲನ್, ಜೀವನ್, ಕುಶಲ ತುಕಾರಾಮ್, ಅರುಣ್ ಕುಮಾರ್ ಸಹಿತ ಸಂಘದ ಮತ್ತು ಮಹಿಳಾ ಘಟಕದ ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.
ಮಧ್ಯಾಹ್ನ ಗಂಟೆ 12.00ರಿಂದ ರಾತ್ರಿ ಗಂಟೆ 12.00ರ ವರೆಗೆ ತಾಲೂಕಿನ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ ನಡೆಯಿತು.

