ಹುಬ್ಬಳ್ಳಿ : ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಸಮಾಜ ಸೇವಾ ನಿರತೆ ಸಂಜನಾ ಕುಲಿಗೋಡ ಅವರಿಗೆ ಕನ್ನಡ ಭವನದ ಪ್ರತಿಷ್ಠಿತ “ಅಂತರ್ ರಾಜ್ಯ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026” ಘೋಷಿಸಲಾಗಿದೆ.
ಜುಲೈ 26ರಂದು ನಡೆಯಲಿರುವ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

