ತುಮಕೂರು: ಮಾಜಿ ಉಪಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಆರಾಮಾಗಿದ್ದಾರೆ. ಆದರೆ ಅವರು ಬದುಕಿದ್ದಾಗಲೇ ತುಮಕೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣರಿಂದ ಪ್ರಮಾದವೊಂದು ಜರುಗಿದೆ. ವಿ. ಸೋಮಣ್ಣಗೆ ತಪ್ಪು ಮಾಹಿತಿ ಬಂದಿದ್ದು, ಮಹಾ ಯಡವಟ್ಟು ನಡೆದಿದೆ.
ಕೇಂದ್ರ ಸಚಿವ ವಿ. ಸೋಮಣ್ಣರಿಗೆ ಬಹಿರಂಗ ಸಭೆಯಲ್ಲೇ ಮಾಜಿ ಉಪ ಪ್ರಧಾನಿ ಲಾಲ್ಕೃಷ್ಣ ಅಡ್ವಾಣಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ಕೇಂದ್ರ ಸಚಿವರಿಗೆ ಅಭಿಂದನಾ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಇದೀಗ ತಾನೆ ನಮಗೆ ಮಾಹಿತಿ ಬಂದಿದೆ. ಎ.ಕೆ. ಅಡ್ವಾಣಿಯವರು ಸಾವನ್ನಪ್ಪಿದ್ದಾರೆ. ನಾನು ದೆಹಲಿಗೆ ಹೋಗಬೇಕಿದೆ ಎಂದು ಸೋಮಣ್ಣ ಘೋಷಣೆ ಮಾಡಿದ್ದಾರೆ.
ದೆಹಲಿಗೆ ಹೊರಡುವ ಕಾರಣ ನೀಡಿ ಸಭೆ ಮೊಟಕುಗಳಿಸಿದ ಸೋಮಣ್ಣ, ಎಲ್ಲರೂ ಎದ್ದು ನಿಂತು ಮೌನಾಚರಣೆ ಮಾಡುವಂತೆ ವಿನಂತಿಸಿದ್ದಾರೆ. ಕೇಂದ್ರ ಸಚಿವ ಸೋಮಣ್ಣಗೆ ಗುಬ್ಬಿಯ ಬಿಜೆಪಿ-ಜೆಡಿಎಸ್ ಮುಖಂಡರು ಸಾಥ್ ನೀಡಿದ್ದರು.