ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು: ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0
25

ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು (ರಿ.) ಮತ್ತು ಸಾರ್ವಜನಿಕರ ವತಿಯಿಂದ ನಡೆಯುವ 46ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಜು. 29 ಮಂಗಳವಾರ ನಾಗರಪಂಚಮಿ ಯ ಶುಭದಿನದಂದು ಟ್ರಸ್ಟ್ ನ ಕಟ್ಟಡದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು, ಗೌರವ ಸಲಹೆಗಾರರು, ಟ್ರಸ್ಟಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಟ್ರಸ್ಟ್ ನ ಅಧ್ಯಕ್ಷರಾದ ಯಶೋಧರ ಶೆಟ್ಟಿ ಕಣಿಯೂರು ನೆರೆದವರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಹಾಗೂ ಟ್ರಸ್ಟ್ ನ ಕಾರ್ಯದರ್ಶಿ ಸುಕೇಶ್ ಗೌಡ ಬರೆಮೇಲು ಎಲ್ಲರಲ್ಲೂ ಕಾರ್ಯಕ್ರಮ ಯಶಸ್ಸಿಗೆ ಸಹಕಾರ ಕೋರಿ ಧನ್ಯವಾದ ಸಮರ್ಪಿಸಿದರು. ನೆರೆದವರಿಗೆ ಲಘು ಉಪಹಾರದ ವ್ಯವಸ್ಥೆಯನ್ನು ಟ್ರಸ್ಟ್ ನ ಸದಸ್ಯರು ಕೊಡುಗೈ ಧಾನಿ ಪದ್ಮನಾಭ ಶಿಲ್ಪಿ ಪಿಲಿಗೂಡು ಇವರು ನೀಡಿ ಸಹಕರಿಸಿದರು.

LEAVE A REPLY

Please enter your comment!
Please enter your name here