ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆ: ಗಾಂಧಿ ವಿಚಾರಧಾರೆ : ಎಸ್.ಡಿ. ಸಾಮ್ರಾಜ್ಯ ಸ್ಮಾರಕ ಅಂತರ್ ಕಾಲೇಜು ಭಾಷಣ ಸ್ಪರ್ಧೆ

0
77



ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆದ ಗಾಂಧಿ ವಿಚಾರಧಾರೆ ಕುರಿತು ಎಸ್ ಡಿ ಸಾಮ್ರಾಜ್ಯ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಭಾಷಣ ಸ್ಪರ್ಧೆಯ ಸಮಾರೋಪ ಸಮಾರಂಭ ದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಮೂಡಬಿದರೆ ಶಾಖೆಯ ಮುಖ್ಯ ಪ್ರಬಂಧಕರಾದ ತುಳಸಿ ಹಾಗೂ ಕಾಲೇಜಿನ ಹೆಮ್ಮೆಯ ಹಳೆ ವಿದ್ಯಾರ್ಥಿ ವಿವೇಕಾನಂದ ಪದವಿಪೂರ್ವ ಕಾಲೇಜು ಎಡಪದವು ಇಲ್ಲಿಯ ದೈಹಿಕ ಶಿಕ್ಷಕ ಪ್ರೇಮನಾಥ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಬಹುಮಾನ ವಿತರಿಸಿದರು.
ಕಾರ್ಕಳ ಭುವನೇಂದ್ರ ಕಾಲೇಜಿನ ಸಿಂಚನ ಕೆ.ಎಸ್. ಪ್ರಥಮ ಬಹುಮಾನ ಗಳಿಸಿದರು. ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹೆಚ್. ವರ್ಷ ದ್ವಿತೀಯ ಬಹುಮಾನ ಮತ್ತು ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಶ್ರೀವಿದ್ಯಾ.ಎನ್ ತೃತೀಯ ಬಹುಮಾನ ಪಡೆದರು. ಸುರತ್ಕಲ್ ಗೋವಿಂದ ದಾಸ ಕಾಲೇಜಿನ ತೇಜಸ್ವಿನಿ ಕರ್ಕೇರ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ರಕ್ಷಿತಾ ಮತ್ತು ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಭಾಗ್ಯ ಸಮಾಧಾನಕರ ಬಹುಮಾನ ಗಳಿಸಿದರು.
ನಿಟ್ಟೆ ವೃತ್ತಿಪರ ಶಿಕ್ಷಣ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಪ್ರದೀಪ್ ಕೆ ಎಸ್, ಸಂತ ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅವಿನಾಶ್ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಮುನಿಯಲ ಹೆಬ್ರಿಯ ಉಪನ್ಯಾಸಕಿ ಜಯಶ್ರೀ ತೀರ್ಪುಗಾರರಾಗಿ ಸಹಕರಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ
ವಿಜಯಲಕ್ಷ್ಮಿ, ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಹರೀಶ್, ಮಾನವಿಕ ಸಂಘದ ಸಂಯೋಜಕಿ ಗೀತಾರಾಮಕೃಷ್ಣ, ವಿದ್ಯಾರ್ಥಿ ಸಂಘದ ನಾಯಕಿ ಸಾಕ್ಷಿ ಶೆಟ್ಟಿ, ಸಾಕ್ಷಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಫ್ಲೋರಿನ್ ಸ್ವಾಗತಿಸಿ, ರಂಜಿತ್ ವಂದಿಸಿದರು. ಮಾನವಿಕ ಸಂಘದ ವಿದ್ಯಾರ್ಥಿ ಕಾರ್ಯದರ್ಶಿ ಸಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here