ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ ಇಂದು ಶ್ರೀದೇವರ ಸನ್ನಿಧಿಯಲ್ಲಿ ಶ್ರೀ ಗುರು ಪೂರ್ಣಿಮಾ ಕಾರ್ಯ ಕ್ರಮ ಭಜನಾ ಮೋಹೋತ್ಸವ , ಶ್ರೀ ನಿತ್ಯಾನಂದ ಸ್ವಾಮೀಜಿಗೆ ಪಂಚಾಮೃತ ಅಭಿಷೇಕ , ಸೀಯಾಳ ಅಭಿಷೇಕ ನಡೆಯಿತು.
ಭಜನಾ ಮೋಹೋತ್ಸವಕ್ಕೆ ಹರ್ಷದ ಸೂರ್ಯ ಪ್ರಕಾಶ್ ದೀಪ ಬೆಳಗಿಸಿ ಚಾಲನೆ ನೀಡಿದರು. ಹರ್ಷ ಬಳಗದವರಿಂದ ಭಜನಾ ಕಾರ್ಯಕ್ರಮ ಆರಂಭ ಗೊಂಡು ನಿರಂತರ ರಾತ್ರಿವರೆಗೆ ಭಜನೆ ನೆಡೆಯಿತು , ಮಧ್ಯಾಹ್ನ ಮಹಾಪೂಜೆಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು.
ಕೆ ದಿವಾಕರ್ ಶೆಟ್ಟಿ ತೋಟದಮನೆ ಕೊಡವೂರು , ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಬನ್ನಂಜೆ , ಕಾರ್ಯದರ್ಶಿ ಈಶ್ವರ ಶೆಟ್ಟಿ ಚಿಟ್ಪಾಡಿ , ತೋನ್ಸೆ ನವೀನ್ ಶೆಟ್ಟಿ , ಮೋಹನ್ ಚಂದ್ರ ನಂಬಿಯಾರ್ , ತಾರಾನಾಥ್ ಮೇಸ್ತ , ಅರ್ಚಕರಾದ ಓಂ ಪ್ರಕಾಶ್ , ಅಮಿತ್ ಶುಕ್ಲಾ ಧಾರ್ಮಿಕ ಪೂಜಾ ಕಾರ್ಯ ನೆಡೆಸಿಕೊಟ್ಟರು