ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಶ್ರೀ ವಿಠೋಬ ಭಜನಾ ಮಂದಿರದ 66ನೇ ಭಜನಾ ಮಂಗಲೋತ್ಸವದ ಪೂರ್ವಭಾವಿಯಾಗಿ ನಡೆದ ಭಜನಾ ಸಪ್ತಾಹಕ್ಕೆ ಸಂಘದ ಅಧ್ಯಕ್ಷ ಶಿವದಾಸ್ ಪಿ. ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಎ.ಮುದ್ದಣ್ಣ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಕೋಶಾಧಿಕಾರಿ ದಯಾನಂದ ಎ., ಪ್ರಧಾನ ಕಾರ್ಯದರ್ಶಿ ರಾಜೇಶ್, ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ವಿನಯ್ ಕುಮಾರ್, ಗೌರವ ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಭಜನಾ ಸಹ ಸಂಚಾಲಕ ಶಂಕರ ಪೂಜಾರಿ, ಮಹಿಳಾ ಘಟಕದ ಗೌರವ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಚಾಲಕಿ ಗೋಧಾವರಿ ಎಮ್. ಸುವರ್ಣ, ಸಂಘದ ಆಡಳಿತ ಸಮಿತಿ ಸದಸ್ಯರಾದ ಸುಧಾಕರ್ ಎ., ರಮೇಶ್ ಕೋಟ್ಯಾನ್, ಕುಶಲ್ ಕುಮಾರ್ ಎ., ಲಕ್ಷ್ಮಣ ಪೂಜಾರಿ, ಗುರುರಾಜ್ ಪೂಜಾರಿ, ನಿತಿನ್ ಕುಮಾರ್, ಜನಾರ್ಧನ ಪೂಜಾರಿ, ಮಹಿಳಾ ಘಟಕದ ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ವಾಣಿಶ್ರೀ ಅರುಣ್, ಜತೆ ಕಾರ್ಯದರ್ಶಿ ಸಂಚಲ ಶಶಿಕಾಂತ್, ಸಮಿತಿ ಸದಸ್ಯರಾದ ವಿಜಯಲಕ್ಷ್ಮಿ ಎಸ್. ಕುಮಾರ್, ಕಲ್ಯಾಣಿ ಆನಂದ, ಅರ್ಚಕರಾದ ಅವಿನಾಶ್ ಪೂಜಾರಿ, ಜೀವನ್, ಅದಿತ್ ಹಾಗೂ ರಾಜು ಕಡೆಕಾರ್, ಗಂಗಾಧರ್, ರಿದೀಶ್, ಅದೀಶ್ ಕಪ್ಪೆಟ್ಟು ಸಹಿತ ಸಂಘದ ಮತ್ತು ಮಹಿಳಾ ಘಟಕದ ಸದಸ್ಯರು ಉಪಸ್ಥಿತರಿದ್ದರು.

