ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾ.ಯೋ. ಅಳಿಕೆ ವಲಯ; ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

0
147

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ವಿಟ್ಲ ಅಳಿಕೆ ವಲಯದ ಜನಜಾಗೃತಿ ಕಾರ್ಯಕ್ರಮದಡಿಯಲ್ಲಿ ಸ್ಥಾಸ್ಯ ಸಂಕಲ್ಪ ಕಾರ್ಯಕ್ರಮವು ಶ್ರೀಸತ್ಯ ಸಾಯಿ ಲೋಕಸೇವಾ ಪ್ರೌಢಶಾಲೆ ಅಳಿಕೆಯಲ್ಲಿ ನಡೆಸಲಾಯಿತು.

ಶಾಲಾ ಅಧ್ಯಾಪಕರಾದ ನಾರಾಯಣರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಒಕ್ಕೂಟ ನಿಕಟಪೂರ್ವ ಅಧ್ಯಕ್ಷರಾದ ಬಾಲಕೃಷ್ಣ ಪೂಜಾರಿ ಸಣ್ಣಗುತು, ಒಕ್ಕೂಟ ಪದಾಧಿಕಾರಿಯಾದ ವಿಜಯಲಕ್ಷ್ಮೀ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿ ಹಾಗೂ ಜನಜಾಗೃತಿ ವಲಯಾಧ್ಯಕ್ಷರಾದ ಬಾಲಕೃಷ್ಣ ಕಾರಂತ್ ಏರುಂಬು ಇವರು ಮಕ್ಕಳಿಗೆ ಮುಂದಿನ ಜೀವನದಲ್ಲಿ ಶಿಸ್ತನ್ನು ಆಳವಡಿಸಿಕೊಳ್ಳಬೇಕು ಹಾಗೂ ದುಶ್ಚಟಗಳ ಅರಿವು ಮೂಡಿಸುವ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ವಲಯ ಮೇಲ್ವಿಚಾರಕಿಯಾದ ಮೀನಾಕ್ಷಿ ನಿರ್ವಹಿಸಿ, ಸೇವಾಪ್ರತಿನಿಧಿ ಚಂದ್ರಾವತಿಯವರು ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here