Monday, May 12, 2025
HomeUncategorizedರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದರೆ 11 ಲಕ್ಷ ಬಹುಮಾನ | ನಾಲಿಗೆ ಹರಿಬಿಟ್ಟ ಶಿವಸೇನೆ ಶಾಸಕ...

ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸಿದರೆ 11 ಲಕ್ಷ ಬಹುಮಾನ | ನಾಲಿಗೆ ಹರಿಬಿಟ್ಟ ಶಿವಸೇನೆ ಶಾಸಕ ಗಾಯಕ್ವಾಡ್‌

ನವದೆಹಲಿ: ಮೀಸಲಾತಿ ರದ್ದುಗೊಳಿಸುವ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಹೇಳಿಕೆಯನ್ನು ಖಂಡಿಸುವ ಭರದಲ್ಲಿ, ರಾಹುಲ್‌ ಗಾಂಧಿ ನಾಲಿಗೆ ಕತ್ತರಿಸುವವರಿಗೆ 11 ಲಕ್ಷ ಬಹುಮಾಡ ನೀಡುವುದಾಗಿ ಬುಲ್ದಾನ ಕ್ಷೇತ್ರದ ಶಾಸಕ ಶಿವಸೇನಾ ಶಾಸಕ ಸಂಜಯ್‌ ಗಾಯಕ್ವಾಡ್‌ ಘೋಷಿಸಿದ್ದಾರೆ. ಮೀಸಲಾತಿ ಕುರಿತು ರಾಹುಲ್‌ ಗಾಂಧಿ ನೀಡಿರುವ ಹೇಳಿಕೆಯು ಕಾಂಗ್ರೆಸ್‌ನ ನಿಜವಾದ ಮುಖವನ್ನು ಬಹಿರಂಗಗೊಳಿಸಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ಲೇಕಸಭೆ ಚುನಾವಣೆಯ ವೇಳೆ ಸಂವಿಧಾನಕ್ಕೆ ಅಪಾಯವಿದೆ. ಬಿಜೆಪಿಯವರು ಸಂವಿಧಾನ ಬದಲಿಸುತ್ತಾರೆ ಎಂದು ಹೇಳಿ ಮತಪಡೆದವರು, ಇಂದು ಅಮೆರಿಕದಲ್ಲಿ ಬಾಬಾ ಸಾಹೇಬ್‌ ಡಾ. ಅಂಬೇಡ್ಕರ್‌ ನೀಡಿದ ಮೀಸಲಾತಿಯನ್ನು ಕೊನೆಗೊಳಿಸುತ್ತೇ ಎಂದು ಹೇಳಿಕೆ ನೀಡಿದ್ದಾರೆ/ ರಾಹುಲ್‌ ಅವರ ಬಾಯಿಯಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ ಎಂದು ಗಾಯಕ್ವಾಡ್‌ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular