ಬಜಪೆ:ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಿನ್ನಿಗೋಳಿ ವಲಯದ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಬಡಗ ಎಕ್ಕಾರಿನ ಸರಕಾರಿ ಪ್ರೌಢಶಾಲೆಯಲ್ಲಿ ಇಂದು ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಜನ ಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಹಾಗೂ ಯುಗಪುರುಷ ಕಿನ್ನಿಗೋಳಿಯ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ದುಶ್ಚಟಗಳಿಂದ ನಮ್ಮ ನೆಮ್ಮದಿಯೇ ಹಾಳುಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ.ನಾವೆಲ್ಲರೂ ದುಶ್ಚಟಗಳಿಂದ ದೂರ ವಿರಬೇಕು ಎಂದರು. ಕಾರ್ಯಕ್ರಮದಲ್ಲಿ ತುಳು ಸಾಹಿತ್ಯ ಆಕಾಡೆಮಿಯ ಮಾಜಿ ಅಧ್ಯಕ್ಷ ದಯಾನಂದ ಜಿ ಕತ್ತಲ್ ಸಾರ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ತಮ್ಮ ಜೀವನದಲ್ಲಿ ವಿಶಿಷ್ಟ ಸಾಧನೆಯನ್ನು ಮಾಡಬೇಕಾದರೆ ನಮಗೆ ಸ್ವಾಸ್ತ್ಯ ಶರೀರ ಅಗತ್ಯ ಸ್ವಾಸ್ಥ್ಯ ಶರೀರವನ್ನು ಕಾಪಾಡಲು ದುಶ್ಚಟದಿಂದ ನಾವು ಮುಕ್ತರಾಗಿರಬೇಕು. ವಿದ್ಯಾರ್ಥಿಗಳು ದುಶ್ಚಟ ಮುಕ್ತ ಸ್ವಾಸ್ತ್ಯ ಸಮಾಜದ ನಿರ್ಮಾಣದಲ್ಲಿ ತಮ್ಮನ್ನ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಎಕ್ಕಾರು ಘಟಕದ ಅಧ್ಯಕ್ಷೆ ಶ್ರೀಮತಿ ವಿಮಲಾ , ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಇಂದಿರಾ ಎನ್ ರಾವ್, ಹಿರಿಯ ಶಿಕ್ಷಕಿ ರಾಜಶ್ರೀ ಕೆ, ಬಡಗ ಎಕ್ಕಾರು ಸೇವಾ ಪ್ರತಿನಿಧಿ ಶ್ರೀಮತಿ ಸಂಗೀತ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಚಾರಕರಾದ ಶ್ರೀಮತಿ ಶಾಂತಿ ಮೇಲ್ ಸ್ವಾಗತಿಸಿದರು. ಶ್ರೀಮತಿ ಚಿತ್ರ ಶ್ರೀ. ಕೆ ವಂದಿಸಿದರು. ತೆಂಕ ಎಕ್ಕಾರು ಸೇವಾ ಪ್ರತಿನಿಧಿ ದಿವಾಕರ ಕಾರ್ಯಕ್ರಮ ನಿರೂಪಿಸಿದರು.