ಹೆಬ್ರಿ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಗೆ ಸುಬ್ರಹ್ಮಣ್ಯ ಶ್ರೀ ಭೇಟಿ

0
70

ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ಸಮೂಹ ಶಿಕ್ಷಣ ಸಂಸ್ಥೆಗೆ ಕುಕ್ಕೆ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ಶ್ರೀಪಾದರು ಭೇಟಿ ನೀಡಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ದೇವರು ಮನುಷ್ಯನಿಗೆ ಅತ್ಯಮೂಲ್ಯ ಬುದ್ಧಿ ಶಕ್ತಿ ನೀಡಿದ್ದಾನೆ. ನಮ್ಮ ಬುದ್ಧಿಶಕ್ತಿಯನ್ನು ಒಂದು ಕಡೆ ಕೇಂದ್ರೀಕೃತ ಮಾಡಲು ನಾವು ವಿಶೇಷ ಸಾಧನೆ ಮಾಡಬೇಕು. ಆಗ ಜೀವನದಲ್ಲಿ ಸಾರ್ಥಕತೆ ಪಡೆಯಲು ಸಾಧ್ಯ.‌ ಇದನ್ನು ಸಾಧಿಸಲು ನಾವು ಉತ್ತಮ ವಿದ್ಯೆಯನ್ನು ಪಡೆಯಬೇಕು. ಅದಕ್ಕೆ ಸಮಯವನ್ನು ವ್ಯರ್ಥ ಮಾಡಬಾರದು ಅಲ್ಲದೆ ಉತ್ತಮ ಸಂಸ್ಕಾರಯುತ ಶಿಕ್ಷಣ ಪಡೆಯಬೇಕು ಎಂದು ಅನುಗ್ರಹ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಅಮೃತ ಭಾರತಿ ಟ್ರಸ್ಟ್ ನ ಅಧ್ಯಕ್ಷ ಸಿಎ ಎಂ ರವಿರಾವ್, ಟ್ರಸ್ಟಿಗಳಾದ ರಾಜೇಶ್ ನಾಯಕ್, ಲಕ್ಷ್ಮಣ ಭಟ್, ಸುಧೀರ್ ನಾಯಕ್, ವಸತಿ ನಿಲಯದ ಸದಸ್ಯ ರಾಮಕೃಷ್ಣ ಆಚಾರ್ಯ, ಮೂಡುಬಿದ್ರೆಯ ಉದ್ಯಮಿ ಶ್ರೀಪತಿ ಭಟ್, ಸಂಸ್ಥೆಯ ಪಿಆರ್ ಓ ವಿಜಯಕುಮಾರ್ ಶೆಟ್ಟಿ, ಮೇಲ್ವಿಚಾರಕ ರಾಘವೇಂದ್ರ, ಮುಖ್ಯಸ್ಥರಾದ ಪ್ರಕಾಶ್ ಜೋಗಿ, ಅರುಣ್ ಹೆಚ್ ವೈ, ಅನಿತಾ, ಶಕುಂತಲಾ , ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಸ್ವಾಗತಿಸಿ ನಿರೂಪಿಸಿದರು.

LEAVE A REPLY

Please enter your comment!
Please enter your name here