Saturday, January 18, 2025
HomeUncategorizedಯಶಸ್ವಿಯಾದ ಶ್ರೀ ಗಾಯತ್ರಿ ಪೂಜೆ, ಉಪಾಸನೆ

ಯಶಸ್ವಿಯಾದ ಶ್ರೀ ಗಾಯತ್ರಿ ಪೂಜೆ, ಉಪಾಸನೆ

ದಾವಣಗೆರೆ;ದಾವಣಗೆರೆಯ ಆಧ್ಯಾತ್ಮ ಪರಂಪರೆಯ ಕ್ರಿಯಾತ್ಮಕ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದ ಆಶ್ರಯದಲ್ಲಿ ಪ್ರತೀ ತಿಂಗಳು ಹುಣ್ಣಿಮೆಯಂದು ನಿರಂತರ ೨೫ ವರ್ಷಗಳಿಂದ ನಡೆದು ಬಂದ ಶ್ರೀ ಗಾಯತ್ರಿ ಪೂಜೆ ಉಪಾಸನೆ ಹೊಸ್ತಿಲ ಹುಣ್ಣಿಮೆ ಪ್ರಯುಕ್ತ ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದ ಸಭಾಂಗಣದಲ್ಲಿ ನಿನ್ನೆ ನಡೆದ ಈ ಧಾರ್ಮಿಕ ಸೇವೆ ಪೂಜೆ ಪರಿವಾರದ ಸಂಚಾಲಕರಾದ ಪೂಜಾ ಸೇವಾಕರ್ತ ಭಾವನ್ನಾರಾಯಣ ಮತ್ತು ಕುಟುಂಬ ದವರು ನಡೆಸಿಕೊಟ್ಟರು ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ. ಪೂಜೆಯ ಸೇವೆಯಲ್ಲಿ ಪರಿವಾರದ ಸಮಿತಿ ಸದಸ್ಯರಾದ ಎಂ.ಎಸ್.ಪ್ರಸಾದ್, ವಿ.ಕೃಷ್ಣಮೂರ್ತಿ, ಡಿ.ಲಹೆಚ್.ಚನ್ನಬಸಪ್ಪ, ವಿಕ್ರಂಜೈನ್, ಗುರುಪಾದಪ್ಪ, ಸತೀಶ್ ಆರ್.ಎಂ. ಮುಂತಾದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular