Saturday, June 14, 2025
HomeUncategorizedಯಶಸ್ವಿಯಾದ ಶ್ರೀ ಗಾಯತ್ರಿ ಪೂಜೆ, ಉಪಾಸನೆ

ಯಶಸ್ವಿಯಾದ ಶ್ರೀ ಗಾಯತ್ರಿ ಪೂಜೆ, ಉಪಾಸನೆ


ದಾವಣಗೆರೆ: ದಾವಣಗೆರೆಯ ಆಧ್ಯಾತ್ಮ ಪರಂಪರೆಯ ಕ್ರಿಯಾತ್ಮಕ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದ ಆಶ್ರಯದಲ್ಲಿ ಪ್ರತೀ ತಿಂಗಳು ಹುಣ್ಣಿಮೆಯಂದು ನಿರಂತರ 25 ವರ್ಷಗಳಿಂದ ನಡೆದು ಬಂದ ಶ್ರೀ ಗಾಯತ್ರಿ ಪೂಜೆ ಉಪಾಸನೆ ಬುದ್ಧ ಪೂರ್ಣಿಮೆ ಪ್ರಯುಕ್ತ ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದ ಸಭಾಂಗಣದಲ್ಲಿ ನಡೆದ ಈ ಧಾರ್ಮಿಕ ಸೇವೆ ಪೂಜೆ ಸುಸಂಪನ್ನಗೊಂಡಿತು ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.
ಈ ತಿಂಗಳ ಕಾರ್ಯಕ್ರಮ ಶ್ರೀ ಬೇಳೂರು ಸಂತೋಷ್‌ಕುಮಾರ್ ಶೆಟ್ಟಿ ಮತ್ತು ಕುಟುಂಬ ದವರಿಂದ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪರಿವಾರದ ಅಧ್ಯಕ್ಷರಾದ ಡಾ|| ರಮೇಶ್ ಪಟೇಲ್, ಖಜಾಂಚಿ ಪುರುಷೋತ್ತಮ ಪಟೇಲ್, ಸಂಚಾಲಕರಾದ ಭಾವನ್ನಾರಾಯಣ, ಪರಿವಾರದ ಗೌರವ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್, ಸತೀಶ್ ಆರ್.ಎಂ., ಮುಂತಾದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular