ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಹಿರಿಯ ವರದಿಗಾರ ಸುಬ್ರಹ್ಮಣ್ಯ ಜಿ.ಭಟ್(ಸುಜಿ ಕುರ್ಯ), ಪ್ರಧಾನ ಕಾರ್ಯದರ್ಶಿಯಾಗಿ ನಝೀರ್ ಪೊಲ್ಯ ಹಾಗೂ ಕೋಶಾಧಿಕಾರಿಯಾಗಿ ಹರೀಶ್ ಕುಂದರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ವಾರ್ತಾಧಿಕಾರಿ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಾಧ್ಯಕ್ಷರಾಗಿ ಪ್ರಭಾಕರ ಆಚಾರ್ಯ ಚಿತ್ತೂರು, ಉದಯ ಕುಮಾರ್ ಮುಂಡ್ಕೂರು, ಉದಯ ಕುಮಾರ್ ಶೆಟ್ಟಿ, ಕಾರ್ಯದರ್ಶಿಗಳಾಗಿ ಉಮೇಶ್ ಮಾರ್ಪಳ್ಳಿ, ಸುರೇಶ್ ಎಮಾರ್ಳ್ ಹಾಗೂ ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಮೂವರು ಸ್ಪರ್ಧಿಸಿದ್ದು, ಉದಯವಾಣಿ ಫೋಟೋ ರ್ಜನಲಿಸ್ಟ್ ಆಸ್ಟ್ರೊ ಮೋಹನ್ 44 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರು: ಪ್ರಜ್ವಲ್ ಅಮೀನ್, ಜನಾರ್ದನ ಕೊಡವೂರು, ಚೇತನ್ ಮಟಪಾಡಿ, ಮುಹಮ್ಮದ್ ಶರೀಫ್, ರಮಾನಂದ ಅಜೆಕಾರು, ಯೋಗೀಶ್ ಕುಂಭಾಶಿ, ಬಿ.ರಾಘವೇಂದ್ರ ಪೈ, ಕೆ.ಚಂದ್ರಶೇಖರ್ ಚಾಲುಕ್ಯ, ಪ್ರಮೋದ್ ಸುವರ್ಣ, ವಿಜಯ ಆಚಾರ್ಯ, ಪ್ರವಿಣ್ ಮುದ್ದೂರು, ಮೋಹನ್ ಉಡುಪ, ಸುಕುಮಾರ್ ಮುನಿಯಾಲು.

