ಮೀನುಗಾರಿಕಾ ದೋಣಿಗಳಿಗೆ ಅಗತ್ಯ ಪ್ರಮಾಣದ ಡಿಸೇಲ್ ಪೂರೈಕೆಗೆ ವಿಶೇಷ ಕ್ರಮ ವಹಿಸುವಂತೆ ಸಂಸದರಾದ ಕೋಟ ಹಾಗೂ ಬ್ರಿಜೇಶ್ ರವರ ನೇತೃತ್ವದಲ್ಲಿ ಉಡುಪಿ ಶಾಸಕರಾದ ಯಶಪಾಲ್ ಸುವರ್ಣ ರವರು ಕೇಂದ್ರ ಸರಕಾರದ ಪೆಟ್ರೋಲಿಯಂ ಸಚಿವರಾದ ಹಾರ್ಧಿಪ್ ಎಸ್.ಪುರಿ ಹಾಗೂ ಕೇಂದ್ರ ಸರಕಾರದ ಮೀನುಗಾರಿಕಾ ಸಚಿವರಾದ ಲಲನ್ ಸಿಂಗ್ ರವರನ್ನು ದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
ಕರಾವಳಿ ಜಿಲ್ಲೆಯ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಮೀನುಗಾರಿಕೆಗೆ ಕಳೆದ ಕೆಲವು ದಿನಗಳಿಂದ ಮಧ್ಯ ಪ್ರಾಚ್ಯ ದೇಶಗಳ ಯುದ್ಧದ ಪರಿಣಾಮದಿಂದ ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯಗೊಂಡು ಮೀನುಗಾರಿಕಾ ಬೋಟ್ ಗಳಿಗೆ ಡೀಸೆಲ್ ಕೊರತೆಯಿಂದ ಬಹುತೇಕ ಮೀನುಗಾರಿಕೆ ಚಟುವಟಿಕೆ ಸ್ತಬ್ಧಗೊಂಡಿದೆ.
ಡಿಸೇಲ್ ಕೊರತೆಯಿಂದ ಮೀನುಗಾರಿಕೆ ಚಟುವಟಿಕೆ ಸ್ತಬ್ಧಗೊಂಡಲ್ಲಿ ಮೀನುಗಾರರು ಸಹಿತ ಮೀನುಗಾರಿಕೆಯನ್ನೇ ಪರೋಕ್ಷವಾಗಿ ಅವಲಂಬಿಸಿರುವ ಲಕ್ಷಾಂತರ ಮಂದಿಯ ಜನಜೀವನಕ್ಕೆ ಸಮಸ್ಯೆಯಾಗಲಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು. ಮನವಿಗೆ ಪೂರಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ದೇಶದ ಡೀಸೆಲ್ ದಾಸ್ತಾನು ಪ್ರಮಾಣಕ್ಕೆ ಅನುಗುಣವಾಗಿ ಮೀನುಗಾರಿಕಾ ವಲಯಕ್ಕೆ ಅಗತ್ಯ ಪ್ರಮಾಣದ ನಿರಂತರ ಡಿಸೇಲ್ ಪೂರೈಕೆಗೆ ವಿಶೇಷ ಆದ್ಯತೆ ನೀಡಲು ಪ್ರಯತ್ನಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮಲ್ಪೆ ಯಾರ್ಡ್ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶಿವಪ್ರಸಾದ್ ಕೋಟ್ಯಾನ್ ಉಪಸ್ಥಿತರಿದ್ದರು.

