ನವದೆಹಲಿ: ಕೋಮು ಘರ್ಷಣೆಗೆ ಸಂಬಂಧಿಸಿದ ಆರೋಪಿಗಳ ಮನೆಗಳನ್ನು ಜಿಸಿಬಿ ಮೂಲಕ ಧ್ವಂಸಗೊಳಿಸುವ ನಿರ್ಧಾರದ ಕುರಿತಂತೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮಂಗಳವಾರ ಎಚ್ಚರಿಕೆಯ ಸಂದೇಶ ನೀಡಿದೆ. ಆರೋಪಿಯ ಮನೆಯನ್ನು ಒಡೆಯುವ ನೋಟಿಸ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇದು ರಾಜ್ಯ ಸರ್ಕಾರದ ಆಯ್ಕೆಗೆ ಬಿಟ್ಟ ವಿಚಾರವಾಗಿದೆ. ಒಂದು ವೇಳೆ ನ್ಯಾಯಾಲಯದ ನಿರ್ದೇಶನವನ್ನು ಉಲ್ಲಂಘಿಸಲು ಬಯಸುವುದಾದರೆ ಆಯ್ಕೆ ನಿಮ್ಮದು (ಸರ್ಕಾರದ್ದು) ಎಂದು ಎಚ್ಚರಿಕೆ ನೀಡಿದೆ.
ಸುಪ್ರೀಂಕೋರ್ಟ್ ಪೀಠದ ನ್ಯಾ. ಬಿ.ಆರ್. ಗವಾಯಿ, ನ್ಯಾ. ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದ್ದು, ಉತ್ತರ ಪ್ರದೇಶ ಸರ್ಕಾರ ಯಾವುದೇ ಕ್ರಮ ತೆಗೆದಯಕೊಳ್ಳದಂತೆ ತಡೆ ನೀಡಿರುವುದಾಗಿ ತಿಳಿಸಿದೆ.