ಹಾಸನ: ಮಾಜಿ ಸಚಿವ ಎಚ್.ಡಿ. ರೇವಣ್ಣರ ಪುತ್ರ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ಕಿರುಕುಳ ಆರೋಪದ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸೂರಜ್ ರೇವಣ್ಣ ಪರವಾಗಿ ಸಂತ್ರಸ್ತನ ವಿರುದ್ಧ ದೂರು ನೀಡಿದ್ದ ದೂರುದಾರನೇ ಈಗ ನಾಪತ್ತೆಯಾಗಿದ್ದಾನೆ ಎಂದು ವರದಿಗಳಾಗಿವೆ.
ಹೊಳೆನರಸೀಪುರ ನಗರ ಠಾಣೆಯಲ್ಲಿ ಎಂಎಲ್ಸಿ ಆಪ್ತ ಶಿವಕುಮಾರ್ ಜೂ. 21ರಂದು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸಂತ್ರಸ್ತನ ವಿರುದ್ಧ ಪ್ರಕರಣ ದಾಖಲಿಸಿದ್ದರು. ಶಿವಕುಮಾರ್ ಫೋನ್ ಸಹ ಸ್ವಿಚ್ ಆಫ್ ಆಗಿದೆ. ಇದರಿಂದ ದೂರುದಾರನ ನಡೆಯ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ ಎಂದು ವರದಿಗಳು ತಿಳಿಸಿವೆ.
ಶಿವಕುಮಾರ್ ನೀಡಿದ್ದ ದೂರಿನಲ್ಲಿ ಸಂತ್ರಸ್ತ 5 ಕೋಟಿ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದ. ಕೊಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ಹಾಕುವ ಬೆದರಿಕೆಯೊಡ್ಡಿದ್ದ ಎಂದು ಆರೋಪಿಸಲಾಗಿತ್ತು.