ಎಸ್ ವಿ ಟಿ : ಯಕ್ಷಗಾನ ಕೇಂದ್ರದ ಉದ್ಘಾಟನೆ

0
93

ಕಾರ್ಕಳ: ಎಸ್ ವಿ ಟಿ ವಿದ್ಯಾಸಂಸ್ಥೆಗಳು ಕಾರ್ಕಳ ಇಲ್ಲಿನ ಯಕ್ಷಗಾನ ಕೇಂದ್ರದ ಪ್ರಸ್ತುತ ಶೈಕ್ಷಣಿಕ ವರ್ಷದ ಉದ್ಘಾಟನಾ ಕಾರ್ಯಕ್ರಮ ಅಂಡಾರು ವಿಠಲ ರುಕ್ಮಿಣಿ ಕಿಣಿ ಸಾಂಸ್ಕೃತಿಕ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ ಶೆಟ್ಟಿ ಕೆ ವಹಿಸಿದ್ದರು. ಯಕ್ಷಗಾನ ಕೇಂದ್ರದ ನಿರ್ದೇಶಕ, ನಿವೃತ್ತ ಉಪನ್ಯಾಸಕರಾದ ಎಸ್ ರಾಮ ಭಟ್ ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಯೋಗೇಂದ್ರ ನಾಯಕ್, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಮಾಲಿನಿ ಕೆ, ಎಸ್ ವಿ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಗೀತಾ ಜಿ ಉಪಸ್ಥಿತರಿದ್ದರು.
ಅಧ್ಯಾಪಕರಾದ ದೇವದಾಸ್ ಕೆರೆಮನೆ ಸ್ವಾಗತಿಸಿ, ನಿರೂಪಿಸಿದರು. ಯಕ್ಷಗಾನ ಕೇಂದ್ರ ಪ್ರಧಾನ ಗುರುಗಳಾದ ಅಜಿತ್ ಕುಮಾರ್ ಜೈನ್ ವಂದಿಸಿದರು.

LEAVE A REPLY

Please enter your comment!
Please enter your name here