ಕೇಂದ್ರದ ಯೋಜನೆಗಳಿಗೆ ಅಂತ್ಯೋದಯ ತತ್ವವೇ ಪ್ರೇರಣೆ

0
58


ಉಡುಪಿ: ಕೇಂದ್ರ ಸರ್ಕಾರ ಜಾರಿಗೊಳಿಸುವ ಜನಪರ ಯೋಜನೆಗಳಿಗೆ ಪಂಡಿತ್​ ದೀನದಯಾಳ್​ ಉಪಾಧ್ಯಾಯ ಅವರ ಅಂತ್ಯೋದಯ ತತ್ವವೇ ಪ್ರೇರಣೆಯಾಗಿದೆ ಎಂದು ಬಿಜೆಪಿ ತೆಲಂಗಾಣ ರಾಜ್ಯಾಧ್ಯಕ್ಷ ಎನ್​.ರಾಮಚಂದ್ರ ರಾವ್​ ಹೇಳಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಸದಸ್ಯ ಪಂಡಿತ್​ ದೀನದಯಾಳ್​ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಹಾಗೂ ‘ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ ಜಿಲ್ಲಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ವಿಶ್ವದ ಅನೇಕ ದೇಶಗಳ ನಡುವೆ ಯುದ್ಧ ನಡೆಯುತ್ತಿದ್ದು, ವಿಪ್ಲವ ಕಾಲದಲ್ಲಿ ಎಲ್ಲಾ ವಸ್ತುಗಳ ದರ ಏರಿಕೆಯಾಗುತ್ತದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಜಿಎಸ್​ಟಿ ದರ ಇಳಿಕೆ ಮಾಡುವ ಮೂಲಕ ಬಡವರು ಮತ್ತು ಮಧ್ಯಮವರ್ಗದವರ ಹಿತ ಕಾಪಾಡಿದ್ದಾರೆ ಎಂದರು.
ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್​ ಶೆಟ್ಟಿ ಅವರ ಅಧ್ಯಕ್ಷತೆ ವಹಿಸಿದ್ದರು. ಕೊಡಗು ಮಾಜಿ ಜಿಲ್ಲಾಧ್ಯಕ್ಷ ಭಾರತೇಶ್​ ವಿಶೇಷ ಆಹ್ವಾನಿತರಾಗಿದ್ದರು. ಮಾಜಿ ಸಚಿವ ಪ್ರಮೋದ್​ ಮಧ್ವರಾಜ್​, ವಿಭಾಗ ಪ್ರಭಾರಿ ಉದಯ್​ ಕುಮಾರ್​ ಶೆಟ್ಟಿ ಉಪಸ್ಥಿತರಿದ್ದರು. ನಗರಸಭಾ ಸದಸ್ಯ ಗಿರೀಶ್​ ಅಂಚನ್​ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ನವೀನ್​ ನಾಯ್ಕ ವಂದಿಸಿದರು.

LEAVE A REPLY

Please enter your comment!
Please enter your name here