Saturday, January 18, 2025
Homeಶಿಕ್ಷಣಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ -ಡಾ.ಮೋಹನ್ ಆಳ್ವ

ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ -ಡಾ.ಮೋಹನ್ ಆಳ್ವ

ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ 5 ನೆ ಜಿಲ್ಲಾ  ಸಮ್ಮೇಳನಕ್ಕೆ ಚಾಲನೆ
ಮಂಗಳೂರು,ಡಿ.5;ಸಮಾಜ ಕಟ್ಟುವಲ್ಲಿ ಪಾತ್ರ ಮುಖ್ಯ, ಮಾಧ್ಯಮ ಜೀವನದ ಅವಿಭಾಜ್ಯ ಅಂಗವಾಗಿದೆ, ಶಿಕ್ಷಣ, ಮಾಹಿತಿ ವಿತರಣೆ ಸಾಮಾಜಿಕ ಜಾಗೃತಿ ಮೂಡಿಸುವ ಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸಿದೆ ಎಂದು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಮೋಹನ್ ಆಳ್ವ ತಿಳಿಸಿದ್ದಾರೆ.
 ಅವರು ನಗರದ ಕುದ್ಮುಲ್ ರಂಗರಾವ್ ಪುರಭವನದ  ದಿ.ಮನೋಹರ ಪ್ರಸಾದ್ ವೇದಿಕೆ, ದಿ. ಭುವನೇಂದ್ರ ಪುದುವೆಟ್ಟು ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ  ಪತ್ರಕರ್ತರ 5ನೇ  ಜಿಲ್ಲಾ ಸಮ್ಮೇಳನವನ್ನು ಗುರುವಾರ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು.
   ಮಾಧ್ಯಮಗಳು ಸಮಾಜದ ದುರ್ಬಲರಿಗೆ ಅಶಕ್ತರಿಗೆ ಶಕ್ತಿ ನೀಡಿದೆ. ಮಾಧ್ಯಮದ ಅತೀರಂಜಿತ ಸುದ್ದಿ,ಸತ್ಯ ನೈತಿಕತೆಯ ಮರೆತ ಸುಳ್ಳು ಸುದ್ದಿ,ಸಾಮಾಜಿಕ ಮಾಧ್ಯಮಗಳಲ್ಲಿ ಸಮಾಜದ ನೈತಿಕತೆಯನ್ನು ಅಪಹಾಸ್ಯ ಮಾಡುವಂತಿದೆ.ಮಾಧ್ಯಮಗಳ ಸಂಶೋಧನೆ,ಆಳವಾದ ಚಿಂತನೆಯ ಮೂಲಕ ಸಮಾಜವನ್ನು ಇನ್ನಷ್ಟು ಬಲಿಷ್ಠ ವಾಗಿ ಕಟ್ಟುವ  ಅಗತ್ಯವಿದೆ ಎಂದರು.
*ಯುವ ಜನರಲ್ಲಿ ಓದುವ ಹವ್ಯಾಸ ಕುಂಠಿತವಾಗಬಾರದು-ಶಿವ ಸುಬ್ರಹ್ಮಣ್ಯ
   ಸಮ್ಮೇಳನದ ಸರ್ವಾಧ್ಯಕ್ಷ ಶಿವಸುಬ್ರಹ್ಮಣ್ಯ ನಾತನಾಡುತ್ತಾ,ಇತ್ತೀಚಿನ ಡಿಜಿಟಲ್ ಕ್ರಾಂತಿಯಿಂದ ಪತ್ರಕರ್ತರು ನಲುಗಿದ್ದಾರೆ.ಈ ಕ್ರಾಂತಿ ಆತಂಕವನ್ನು ಸೃಷ್ಟಿಸಿದೆ. ತಾನು ಆರಂಭದಲ್ಲಿ ಮುಂಗಾರು ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ.ಬಳಿಕ ಹಲವು ಪತ್ರಿಕೆಗಳಲ್ಲಿ ಕೆಲಸ ಮಾಡಿದ ಬಳಿಕ ಕೆಂಪೆನಿ ಕಲ್ಚರ್ ಗೆ ಒಗ್ಗಿಕೊಳ್ಳದೆ ವೃತ್ತಿಪರ ಮಾಧ್ಯಮ ಕ್ಷೇತ್ರದಿಂದ ನಿರ್ಗಮಿ ಸಿದೆ. ಪತ್ರಿಕಾಲಯದ ಕೆಟ್ಟ ನಡವಳಿಕೆ ನನ್ನನ್ನು ದುರ್ಬಲ ಗೊಳಿ ಸಿದೆ.ಪತ್ರಕರ್ತರ ಗ್ರಾಮ ವಾಸ್ತವ್ಯದ ಮೂಲಕ  ಸರಕಾರ ಮಾಡದ ಕೆಲಸ ಪತ್ರಕರ್ತರು ಮಾಡುತ್ತಿರುವುದು ಶ್ಲಾಘ ನೀಯ. ಪತ್ರಿಕೋದ್ಯಮ ಒಂದು ಅದ್ಭುತ ಲೋಕ‌.ಆದರೆ ನಾನು ಪತ್ರಿಕೋದ್ಯಮದ ಕಲುಷಿತ ವಾತಾವರಣವನ್ನು ಸಂವೇದನೆ ಕಳೆದು ಕೊಂಡಿರುವುದನ್ನು,ಗುಂಪು ಗಾರಿಕೆಯನ್ನು ಹಣದ ಹಪಹಪಿಕೆಯ ಪತ್ರಕರ್ತರನ್ನು ಕಂಡಿದ್ದೇನೆ.ಪತ್ರಕರ್ತರನ್ನು ವ್ಯವಸ್ಥಿತವಾಗಿ ಮುಗಿಸುವ ವ್ಯವಸ್ಥೆ ಯಿಂದ ಬೇಸತ್ತು  ದೂರ ಉಳಿದಿದ್ದೇನೆ.ಕನ್ನಡ ಪತ್ರಿಕೋದ್ಯಮದ ಅವನತಿಗೆ ಪತ್ರಿಕೆ ನಡೆಸುವವರ ಕೆಲವೊಂದು ಧೋರಣೆಗಳು ಕಾರಣ,ಡಿಜಿಟಲ್  ತಂತ್ರಕ್ಕೆ ಹೆದರಬೇಕಾಗಿಲ್ಲ.
 ಯುವ ಜನರಲ್ಲಿ ಪತ್ರಿಕೆ ಓದುವ ಅಭ್ಯಾಸ ಕುಂಠಿತವಾಗಿದೆ.ಹೀಗಾಗ ಬಾರದು. ಪತ್ರಿಕೋದ್ಯಮಕ್ಕೆ ವಿಶ್ವಾಸಾರ್ಹ ತೆಯ ಕೊರತೆ ಇದೆ.ಪತ್ರಿಕೋದ್ಯಮ,ಪತ್ರಕರ್ತರು ವಿಶ್ವಾಸಾರ್ಹ ತೆಯನ್ನು ಉಳಿಸಿಕೊಳ್ಳದೆ ಇದ್ದರೆ ಅಪಾಯವಿದೆ.ಯುವ ಪತ್ರಕರ್ತರು ಬದ್ಧತೆಯೊಂದಿಗೆ,ಜಾತೀಯತೆಗೆ ಒಳಗಾಗದೆ, ಗುಂಪುಗಾರಿಕೆಗೆ ಒಳಗಾಗ ಬೇಡಿ,ಹಿರಿಯ ಮಾರ್ಗದರ್ಶನ ಪಡೆದುಕೊಂಡು ಮುಂದುವ ರಿಯಿರಿ ಎಂದು ಕರೆ ನೀಡಿದರು.ಪತ್ರಕರ್ತರ ಗ್ರಾಮ ವಾಸ್ತವ್ಯ ಒಂದು ಉತ್ತಮ ಕಾರ್ಯಕ್ರಮ ಇಂತಹ ಕೆಲಸ ಇನ್ನಷ್ಟು ನಡೆಯಬೇಕಾಗಿದೆ ಎಂದರು.
ಎಂಆರ್ ಪಿಎಲ್ ನ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ ಹಸಿರೇ ಉಸಿರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಸಮಾಜದ ಒಳಿತಿಗಾಗಿ,ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಪತ್ರಕರ್ತರ ಮಹತ್ವದ ಪಾತ್ರವಿದೆ. ಪತ್ರಕರ್ತರು ಸಮಾಜದ ಕಣ್ಣು ಕಿವಿಗಳಂತೆ ಇರುವವರು ಸಮಾಜ, ಮಾಧ್ಯಮದ ತಪ್ಪುಗಳನ್ನು ಸರಿಪಡಿಸಲು ಮಾರ್ಗದರ್ಶನ ನೀಡುತ್ತಾ ಬಂದಿದ್ದಾರೆ ಎಂದರು.
ಅದಾನಿ ಸಮೂಹದ ಅಧ್ಯಕ್ಷ ಕಿಶೋರ್ ಆಳ್ವ ಮಾತನಾಡುತ್ತಾ, ಪತ್ರಕರ್ತರು ಸಮರ್ಪ ಕವಾಗಿ ಕಾರ್ಯ ನಿರ್ವಹಿಸಲು ವಾತಾವರಣ ನಿರ್ಮಾಣ ಮಾಡು ವಂತಾಗಬೇಕು ಎಂದರು.ದಕ್ಷಿಣ ಕನ್ನಡ ಸಹಕಾರಿ  ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಶುಭ ಹಾರೈಸಿದರು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಾಧಕರನ್ನು ಸನ್ಮಾನಿಸಿ ಮಾತನಾಡುತ್ತಾ, ಹಿಂದೆ ಮಾಹಿತಿಗಾಗಿ ಪತ್ರಿಕೆ ಯನ್ನು ಕಾದು ಕುಳಿತು ಓದುತ್ತಿದ್ದರು.ಆದರೆ ಮೂರು ದಶಕಗಳ ಬಳಿಕ ಸುದ್ದಿ ಮನೆಯಲ್ಲಿ ಬದಲಾವಣೆಯಾಗಿದೆ.ತಂತ್ರಜ್ಞಾನದಲ್ಲಿಯೂ ಬದಲಾವಣೆಯಾಗಿದೆ.ಕನ್ನಡದ ಮೊದಲ ಪತ್ರಿಕೆ ಮಂಗಳೂರಿನಿಂದ ಆರಂಭ ವಾಗಿದೆ.ಸ್ವಾತಂತ್ರ್ಯ ಪೂರ್ವ ದಲ್ಲಿ ಆರಂಭವಾದ ಪತ್ರಿಕೆಗಳ ಸಂಖ್ಯೆ ಕಡಿಮೆ ಇದ್ದರು ಸಮಾಜದಲ್ಲಿ ಪರಿಣಾಮ ಕಾರಿಯಾಗಿ ಕಾರ್ಯ ನಿರ್ವಹಿಸುತ್ತಿತ್ತು.ಆದರೆ ಈಗ ಪತ್ರಿಕೆಯ ಸ್ವರೂಪ ಬದಲಾಗಿದೆ. ಪತ್ರಿಕೆಗೆ ಇರುವ ಶಕ್ತಿಯಿಂದ ನೊಂದವರ ಧ್ವನಿಯಾಗಲು , ಸಮಸ್ಯೆ ಪರಿಹರಿಸಲು ಸಾಧ್ಯ.ನಮ್ಮ ಸುತ್ತಮುತ್ತಲಿನ ಹಲವು ಸಣ್ಣ ಪುಟ್ಟ ಸಮಸ್ಯೆ ಗಳಿಗೆ ಸ್ಪಂದಿಸಬಹುದಾಗಿದೆ.
ಪತ್ರಕರ್ತರು ಸಾಮಾಜಿಕವಾಗಿ ಸ್ಪಂದನೆ ಯೊಂದಿಗೆ ಮಾನವೀಯತೆಯೊಂದಿಗೆ ಸೂಕ್ಷ್ಮ ಸಂವೇದನೆಯೊಂದಿಗೆ ಕಾರ್ಯ ನಿರ್ವಹಿಸ ಬೇಕಾಗುತ್ತದೆ.ಮಾಧ್ಯಮ ಸಾಮಾಜಿಕ ನ್ಯಾಯ ಒದಗಿಸಲು ಶ್ರಮಿಸಬೇಕಾಗಿದೆ ಎಂದರು.
ಸಮಾರಂಭದ ವೇದಿಕೆಯಲ್ಲಿಶಾಸಕ ವೇದವ್ಯಾಸ ಕಾಮತ್ ಪತ್ರಕರ್ತ ದಿ. ವೀರೇಶ್ ಸ್ಮರಣಾರ್ಥಛಾಯಾಚಿತ್ರ ಪ್ರದರ್ಶನ,ಪುಸ್ತಕ ಪ್ರದರ್ಶನ ಉದ್ಘಾಟನೆ ಮಾಡಿದ್ದಾರೆ.
    ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ,ಮನಪಾ ಉಪ ಆಯುಕ್ತ ಚಂದ್ರಶೇಖರ್ ,ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ಪತ್ರಿಕಾ ಭವನ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ,ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ  ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್,ಕಾರ್ಯದರ್ಶಿ ಆರಿಫ್ ಪಡುಬಿದ್ರೆ  ಮೊದಲಾದವರು ಉಪಸ್ಥಿತರಿದ್ದರು.
     ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕ ವಾಗಿ ಮಾತನಾ ಡಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಸ್ವಾಗತಿಸಿ ದರು.ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.
 ದಿನೇಶ್ ಇರಾ ಕಾರ್ಯಕ್ರಮ ನಿರೂಪಿ ಸಿದರು.ಸತೀಶ್ ಇರಾ,ದಿನೇಶ್  ತಂಡದ ವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಆರ್ ಸಿ.ಭಟ್ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಕುತ್ಲೂರು ಶಾಲಾ ವಿದ್ಯಾರ್ಥಿ ಗಳಿಗೆ ಹಾಗೂ ಹರಿಹರ ಶಾಲಾ ವಿದ್ಯಾರ್ಥಿ ಗಳಿಗೆ ಸಮವಸ್ತ್ರ ವಿತರಿಸಲಾಯಿತು.

RELATED ARTICLES
- Advertisment -
Google search engine

Most Popular