Friday, May 16, 2025
Homeಉಡುಪಿಶ್ರೀ ಸಾಯಿ ಈಶ್ವರ್ ಗುರೂಜಿಯವರ ಮೂವತ್ತೆರಡನೇ ದಿನದ ಪ್ರದಕ್ಷಿಣೆ

ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮೂವತ್ತೆರಡನೇ ದಿನದ ಪ್ರದಕ್ಷಿಣೆ

ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಮೂವತ್ತೆರಡನೇ ದಿನದ ಪ್ರದಕ್ಷಿಣೆಗೆ ಜುಲೈ 15 ಸೋಮವಾರ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಅರ್ಚಕರಾದ ಶ್ರೀ ಹರಿ ಭಟ್ ರವರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ , ಗೋರಕ್ಷಣೆ, ಸನಾತನ ಧರ್ಮ ರಕ್ಷಣೆ ಮತ್ತುಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಬಿಲ್ವಾ ಪತ್ರೆಯ ಗಿಡ ನೀಡಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾದ ಭವಾನಿ ಶಂಕರ ಹೆಗ್ಡೆ , ದ್ವಿತೀಯ ದರ್ಜೆ ಸಹಾಯಕರಾದ ಕೃಷ್ಣ .ಕೆ, ಅಕೌಂಟೆಂಟ್ ನವೀನ, ಸೇವಾ ಗುಮಾಸ್ತರಾದ ಕಿಶೋರ್, ಗೀತಾಂಜಲಿ ಎಮ್.ಸುವರ್ಣ, ಶಿಲ್ಪಾ ಮಹೇಶ್ ಜತನ್, ಸತೀಶ್ ದೇವಾಡಿಗ, ಶಶಾಂಕ್, ಮತ್ತು ಅಭಿಮಾನಿ ಭಕ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular