ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಮೂವತ್ತಾಆರನೇ ದಿನದ ಪ್ರದಕ್ಷಿಣೆಗೆ ಜುಲೈ 19 2024 ಶುಕ್ರವಾರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯರವರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ , ಗೋರಕ್ಷಣೆ, ಸನಾತನ ಧರ್ಮ ರಕ್ಷಣೆ ಮತ್ತು ಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಬಿಲ್ವಾ ಪತ್ರೆಯ ಗಿಡ ನೀಡಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಕ್ಷೇತ್ರಧಿಕಾರಿ ಗಿರಿಧರ್ ಎಸ್ . ಸುವರ್ಣ, ಕಾರ್ಯದರ್ಶಿ ನಾರಾಯಣ ಕರ್ಕೇರ , ಕಮಾಲಕ್ಷ ಶೆಣೈ , ರಾಮ , ಮಹೇಶ್ , ರಾಜೇಶ್, ಗೀತಾಂಜಲಿ ಎಮ್. ಸುವರ್ಣ , ವೀಣಾ ಎಸ್ . ಶೆಟ್ಟಿ, ವಿಜಯ ಕುಂದರ್ , ಗೀತಾ, ಸತೀಶ್ ದೇವಾಡಿಗ, ಶಶಾಂಕ್, ಮತ್ತು ಅಭಿಮಾನಿ ಭಕ್ತರು ಉಪಸ್ಥಿತರಿದ್ದರು.