ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಮೂವತ್ತ ಮೂರನೇ ದಿನದ ಪ್ರದಕ್ಷಿಣೆಗೆ ಜುಲೈ 16 2024 ಮಂಗಳವಾರ ಶಿರ್ವ ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕರಾದ ಶ್ರೀನಿವಾಸ್ ಭಟ್ ರವರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ, ಗೋರಕ್ಷಣೆ, ಸನಾತನ ಧರ್ಮ ರಕ್ಷಣೆ ಮತ್ತು ಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಬಿಲ್ವಾ ಪತ್ರೆಯ ಗಿಡ ನೀಡಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ನಿತ್ಯಾನಂದ ಹೆಗ್ಡೆ, ಕೋಶಾಧಿಕಾರಿ ರತ್ನವರ್ಮ ಹೆಗ್ಡೆ, ಕಾಪು ತಾಲೂಕು ಭಜರಂಗದಳದ ಸಂಚಾಲಕರಾದ ಆನಂದ್, ಗೀತಾಂಜಲಿ ಎಮ್. ಸುವರ್ಣ, ವಾರಿಜಾ .ಆರ್.ಕಲ್ಮಾಡಿ, ರಘುರಾಮ್ ಪೂಜಾರಿ, ಜಯರಾಮ್ ಶೆಟ್ಟಿಗಾರ್, ಸತೀಶ್ ದೇವಾಡಿಗ, ಶಶಾಂಕ್, ಮತ್ತು ಅಭಿಮಾನಿ ಭಕ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.