Wednesday, January 15, 2025
Homeಮುಲ್ಕಿತೋಕೂರು: ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಜೃಂಭಣೆಯ ಶ್ರೀ ದೇವರ ಧ್ವಜಾರೋಹಣ

ತೋಕೂರು: ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಜೃಂಭಣೆಯ ಶ್ರೀ ದೇವರ ಧ್ವಜಾರೋಹಣ

ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಷಷ್ಟಿ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಧ್ವಜಾರೋಹಣ ವಿಜೃಂಭಣೆಯಿಂದ ನಡೆಯಿತು
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕ ಮಧುಸೂದನ್ ಆಚಾರ್ಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಶ್ರೀ ದೇವರ ಧ್ವಜಾರೋಹಣ, ಮಹಾಪೂಜೆ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು.
ರಾತ್ರಿ ಬಯನ ಬಲಿ, ಶ್ರೀ ದೇವರ ಕಂಬಳ ಬೆಟ್ಟು ಸವಾರಿ,ಭೂತ ಬಲಿ,ದೀಪದ ಬಲಿ ನಡೆಯಿತು.
ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಗುರುರಾಜ ಎಸ್ ಪೂಜಾರಿ, ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ಹರಿದಾಸ ಭಟ್, ಸದಸ್ಯರಾದ ಪುರುಷೋತ್ತಮ ಕೋಟ್ಯಾನ್, ಸಂಪತ್ ಕುಮಾರ್ ಶೆಟ್ಟಿ ತೋಕೂರು ಗುತ್ತು, ಸವಿತಾ ಶರತ್ ಬೆಳ್ಳಾಯರು, ಅಶೋಕ್ ಕುಂದರ್, ವಿಶ್ವನಾಥ, ಭಾಸ್ಕರ ದೇವಾಡಿಗ, ಶೋಭಾ ವಿ ಅಂಚನ್ ಮತ್ತಿತರರು ಉಪಸ್ಥಿತರಿದ್ದರು.
ಕ್ಷೇತ್ರದಲ್ಲಿ ಡಿಸೆಂಬರ್ 6ರಂದು ಪಂಚಮಿ ಉತ್ಸವ, ಡಿಸೆಂಬರ್ 7ರಂದು ವರ್ಷಾವಧಿ ಷಷ್ಟಿ ಮಹೋತ್ಸವ ಪ್ರಯುಕ್ತ ಶ್ರೀ ದೇವರ ರಥೋತ್ಸವ, ಮಹಾ ಅನ್ನಸಂಪರ್ಪಣೆ  ನಡೆಯಲಿದೆ.

RELATED ARTICLES
- Advertisment -
Google search engine

Most Popular