ಕಟಪಾಡಿ: ಕಳತ್ತೂರು ಶ್ರೀ ಮಹಾಲಿಂಗೇಶ್ವರದೇವಳದಲ್ಲಿ ಏ.25 ರಿಂದ ಮೇ 9ರ ತನಕ ನಡೆಯುವ ಶ್ರೀ ಮಹಾಗಣಪತಿ ದೇವರ ಗರ್ಭಗೃಹ ಸಮರ್ಪಣೆ, ಶ್ರೀ ಮಹಾಲಿಂಗೇಶ್ವರ ದೇವರ ಸಹಸ್ರಕಲಶ ಸಹಿತ ಬ್ರಹ್ಮಕುಂಭಾಭಿಷೇಕ, ಏಕಪವಿತ್ರ ಶ್ರೀ ನಾಗಬ್ರಹ್ಮ ಮಂಡಲೋತ್ಸವ ಶ್ರೀ ಮನ್ಮಹಾರಥೋತ್ಸವ, ಅನ್ನಸಂತರ್ಪಣೆ ಪ್ರಯುಕ್ತ ಚಪ್ಪರ ಮುಹೂರ್ತ ಏ.18ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ನಂದಿಕೂರು ಶ್ರೀ ದುರ್ಗಾಪರಮೇಶ್ವರಿ ದೇವಳದ ಪ್ರಧಾನ ಅರ್ಚಕ ಹಾಗೂ ಆಡಳಿತ ಮೊಕ್ತೇಸರ ಎನ್. ಮಧ್ವರಾಯ ಭಟ್ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಆಡಳಿತ ಮೊಕ್ತೇಸರ, ಪ್ರಧಾನ ತಂತ್ರಿ ವೇ.ಮೂ. ಕುತ್ಯಾರು ಕೇಂಜ ಶ್ರೀಧರ ತಂತ್ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.