ಎಡಪದವು: ಶ್ರೀ ವೀರ ಮಾರುತಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಬಿ. ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಮೇ 1 ರಂದು (ನಾಳೆ) ಜರಗಲಿರುದು. ಬೆಳಿಗ್ಗೆ 7 ರಿಂದ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಗಣಪತಿ ದೇವರಿಗೆ ಗಣಹೋಮ, ಕ್ಷೇತ್ರದಲ್ಲಿ ನವಕ ಹೋಮ, ಶ್ರೀ ವೀರಮಾರುತಿ ದೇವರ ಸನ್ನಿಧಿಯಲ್ಲಿ ವಾಯುಸ್ತುತಿ ಪುನಶ್ಚರಣ ಸಾನಿಧ್ಯ ಕಲಶಾಭಿಷೇಕ ಮತ್ತು ಪ್ರಸನ್ನ ಪೂಜೆ, ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಚಂಡಿಕಾ ಯಾಗ,ಮಧ್ಯಾಹ್ನ 12 ರಿಂದ ಮಹಾ ಪೂಜೆ, ಪಲಕ್ಕಿ ಉತ್ಸವ, ನಂತರ ಮಧ್ಯಾಹ್ನ 1 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 2.30 ರಿಂದ ಹೆಗ್ಗಡೆ ಸಮಾಜ ಬಾಂಧವರಿಂದ ಸಾಂಸ್ಕೃತಿ ಕಾರ್ಯಕ್ರಮಗಳು, ಸಂಜೆ 4 ಗಂಟೆಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ , ಸಂಜೆ 5 ರಿಂದ ಭಜನಾ ಕಾರ್ಯಕ್ರಮ , ಸಂಜೆ 6.30 ರಿಂದ ವಿಶೇಷ ರಂಗಪೂಜೆ, ರಾತ್ರಿ 7 ರಿಂದ ಬಲಿ ಉತ್ಸವ ಮತ್ತು ಪ್ರಸಾದ ವಿತರಣೆ , ರಾತ್ರಿ 8 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಮಂಡಳಿ ,ನಾಗ ವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷರುದ್ರ ಪಟ್ಲ ಸತೀಶ್ ಶೆಟ್ಟಿ ಯವರ ಸಾರಥ್ಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ನಡೆಯಲಿದೆ.