ಕೊಲ್ಕತಾ: ಪಶ್ಚಿಮ ಬಂಗಾಳದ ಜಲ್ಪಾಯ್ಗುರಿ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲಿಗೆ ಕಾಂಚನ್ಜುಂಗಾ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು 15 ಮಂದಿ ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಹಿಂಬದಿಯ ಮೂರು ಬೋಗಿಗಳು ಹಳಿ ತಪ್ಪಿವೆ ಎಂದು ಕತಿಹಾರ್ ವಿಭಾಗದ ವಿಭಾಗೀಯ ರೈಲ್ವೆ ಮ್ಯಾನೇಜರ್ ಹೇಳಿದ್ದಾರೆ.
ಇಲ್ಲಿವರೆಗೆ 15 ಮಂದಿ ಸಾವನ್ನಪ್ಪಿ, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅವರು ಪೊಲೀಸರು ಹೇಳಿದ್ದಾರೆ.
ಡಿಎಂ, ಎಸ್ಪಿ, ವೈದ್ಯರು, ಆಂಬುಲೆನ್ಸ್ಗಳು ಮತ್ತು ವಿಪತ್ತು ನಿರ್ವಹಣಾ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಿವೆ.
ಕಾಂಚನ್ಜುಂಗಾ ಎಕ್ಸ್ಪ್ರೆಸ್ ರೈಲು ಅಗರ್ತಲಾದಿಂದ ಸಿಯಾಲ್ಡಹ್ಗೆ ತೆರಳುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದೆ.