ಗುರುವಾಯನಕೆರೆ ಮತ್ತು ಬಳಂಜಾ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

0
41

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿ ಸಿ ಟ್ರಸ್ಟ್ (ರಿ) ಗುರುವಾಯನಕೆರೆ ಮತ್ತು ಬಳಂಜಾ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರವನ್ನು ಕುವೆಟ್ಟು ಗ್ರಾಮ ಪಂಚಾಯತ್ ಸಭಾಂಗಣ ಗುರುವಾಯನಕೆರೆ ಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೆಂಕಕಾರಂದೂರು ಬಿ ಒಕ್ಕೂಟದ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ ಅವರು ವಹಿಸಿದರು. ಕಾರ್ಯಕ್ರಮವನ್ನು ಗುರುವಾಯನಕೆರೆ ಒಕ್ಕೂಟದ ಅಧ್ಯಕ್ಷರಾದ ಮಹೇಶ್ ರವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು.

ತರಬೇತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ನಾರಾವಿ ವಲಯದ ಮೇಲ್ವಿಚಾರಕರಾದ ವಿಶಾಲ ರವರು ಭಾಗವಹಿಸಿ, ಒಕ್ಕೂಟದ ಮಹತ್ವ, ಒಕ್ಕೂಟದ ಪದಾಧಿಕಾರಿಗಳ ಜವಾಬ್ದಾರಿ,ಒಕ್ಕೂಟದಲ್ಲಿ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನ,ಯೋಜನೆಯಿಂದ ಸಿಗುವ ಸೌಲಭ್ಯಗಳನ್ನು ಸದಸ್ಯರಿಗೆ ಒದಗಿಸಿಕೊಡುವ ಬಗ್ಗೆ, ಸವಿಸ್ತಾರವಾದ ಮಾಹಿತಿಯನ್ನು ನೀಡಿದರು.ಉತ್ತಮ ಒಕ್ಕೂಟವನ್ನು ಗುರುತಿಸಲಾಯಿತು. ಮತ್ತು ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಗುರುವಾಯನಕೆರೆ ವಲಯದ ಮೇಲ್ವಿಚಾರಕರಾದ ಯಶೋದ ರವರು ಸ್ವಾಗತಿಸಿದರು, ಬಳಂಜ ವಲಯದ ಮೇಲ್ವಿಚಾರಕರಾದ ಪದ್ಮಾವತಿ ಅವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ಗುರುವಾಯನಕೆರೆ ಹಾಗೂ ಬಾಳಂಜ ವಲಯದ ಸೇವಾ ಪ್ರತಿನಿಧಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here