ಪರಿಸರ ಸಂರಕ್ಷಣೆ ಹಾಗೂ ಸಮಾಜ ಸೇವೆಯ ಅಂಗವಾಗಿ ಲಯನ್ಸ್ ಕ್ಲಬ್ ಆಫ್ ಮಂಗಳೂರು ಸೋಮೇಶ್ವರ ವತಿಯಿಂದ ಮಡೂರು ರಸ್ತೆ ಮತ್ತು ಪನೀರ್ನ ಡಾಕ್ಟರ್ಸ್ ಎನ್ಕ್ಲೇವ್ ನಡುವಿನ ರಸ್ತೆ ಬದಿಯಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಖ್ಯಾತ ಉದ್ಯಮಿ ಹರೀಶ ಭಂಡಾರಿ ಉದ್ಘಾಟಿಸಿ, ಪರಿಸರ ಸಂರಕ್ಷಣೆಗಾಗಿ ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕ್ಲಬ್ನ ಚಾರ್ಟರ್ ಅಧ್ಯಕ್ಷ ಲಯನ್ ವಿಜಯನ್ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಚಾರ್ಟರ್ ಕಾರ್ಯದರ್ಶಿ ಲಯನ್ ಕೆ. ಗೋಪಿನಾಥ್ ಸ್ವಾಗತಿಸಿದರು. ಚಾರ್ಟರ್ ಖಜಾಂಚಿ ಲಯನ್ ನಿತೀಶ್ ಕೃಷ್ಣ ವಂದನಾರ್ಪಣೆ ಸಲ್ಲಿಸಿದರು.
ಲಯನ್ಸ್ ಸದಸ್ಯರು ಉತ್ಸಾಹದಿಂದ ಗಿಡಗಳನ್ನು ನೆಟ್ಟು, ಅವುಗಳ ಸಂರಕ್ಷಣೆ ಹಾಗೂ ಪೋಷಣೆಯ ಹೊಣೆಗಾರಿಕೆಯನ್ನು ವಹಿಸುವುದಾಗಿ ಸಂಕಲ್ಪ ಮಾಡಿದರು. ಪರಿಸರ ಸಂರಕ್ಷಣೆ ಮತ್ತು ಸಮುದಾಯದ ಕಲ್ಯಾಣಕ್ಕಾಗಿ ಲಯನ್ಸ್ ಕ್ಲಬ್ ಕೈಗೊಂಡಿರುವ ಅರ್ಥಪೂರ್ಣ ಸೇವಾ ಕಾರ್ಯಗಳಲ್ಲಿ ಇದೂ ಒಂದಾಗಿದೆ.

