Tuesday, April 22, 2025
Homeಉಡುಪಿಶ್ರೀ ಸಾಯಿ ಈಶ್ವರ್‌ ಗುರೂಜಿಯವರ ಇಪ್ಪತ್ತಮೂರನೇ ದಿನದ ಪ್ರದಕ್ಷಿಣೆ

ಶ್ರೀ ಸಾಯಿ ಈಶ್ವರ್‌ ಗುರೂಜಿಯವರ ಇಪ್ಪತ್ತಮೂರನೇ ದಿನದ ಪ್ರದಕ್ಷಿಣೆ

ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಇಪ್ಪತ್ತಮೂರನೇ ದಿನದ ಪ್ರದಕ್ಷಿಣೆಗೆ ಜುಲೈ 06 ಶನಿವಾರ ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅರ್ಚಕರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ , ಗೋರಕ್ಷಣೆ, ಸನಾತನ ಧರ್ಮ ರಕ್ಷಣೆ ಮತ್ತುಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಬಿಲ್ವಾ ಪತ್ರೆಯ ಗಿಡ ನೀಡಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಪೆರ್ಡೂರು ಮಾಜಿ ಉಪಾಧ್ಯಕ್ಷ ಸುರೇಶ ಶೇರ್ವೆಗಾರ್,ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರು ತುಕಾರಾಮ್ ನಾಯಕ್, ಸಚಿನ್ ಪೂಜಾರಿ, ಗೆಳೆಯರ ಬಳಗ ಸಂಸ್ಥೆ ಸದಸ್ಯರು ಸತೀಶ್ ಅಣ್ಣು, ಸಂದೇಶ್ ಟಿವಿ, ನಿಶ್ವಲ್ ಶೆಟ್ಟಿ, ಕೃಷ್ಣ ಪೂಜಾರಿ, ಪ್ರಕಾಶ್ ಆಚಾರ್ಯ, ರಶ್ಮಿತಾ ಆರ್ .ಕಲ್ಮಡಿ, ರಾಘು, ಗೀತಾಂಜಲಿ ಎಮ್.ಸುವರ್ಣ, ವೀಣಾ .ಎಸ್. ಶೆಟ್ಟಿ, ಶಿಲ್ಪಾ ಮಹೇಶ್ ಜತನ್, ಸತೀಶ್ ದೇವಾಡಿಗ, ಶಶಾಂಕ್ , ಭಕ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular