Sunday, January 19, 2025
Homeಕಾಪುಉಚ್ಚಿಲ: ಕಾರು ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಉಚ್ಚಿಲ: ಕಾರು ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಕಾಪು: ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಜ.10ರ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಮೃತರನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72) ಎಂದು ಗುರುತಿಸಲಾಗಿದೆ. ಶ್ರೀನಿವಾಸ ತೋಣಿತ್ತಾಯ ಅವರು ಬೆಳಗ್ಗೆ ಮನೆಯಿಂದ ಉಚ್ಚಿಲಕ್ಕೆ ಬಂದು ರಸ್ತೆ ದಾಟುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಅವರು ಘಟನಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಡುಬಿದ್ರಿ ಠಾಣಾ ಪೊಲೀಸು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

RELATED ARTICLES
- Advertisment -
Google search engine

Most Popular