ಉಚ್ಚಿಲ ದಸರಾ ಶೋಭಾಯಾತ್ರೆ; ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

0
64


ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಚ್ಚಿಲ ದಸರಾ ಪ್ರಯುಕ್ತ ಅ. 2 ರಂದು ಬೃಹತ್​ ಶೋಭಾಯಾತ್ರೆ ಮೆರವಣಿಗೆ ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಸಾಗಲಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಟಿಯಿಂದ ಮಾರ್ಗ ಬದಲಾವಣೆಯನ್ನು ಮಾಡಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿದ್ದಾರೆ.
ಉಡುಪಿ-& ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳು ಸಾಯಂಕಾಲ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಬದಲಿ ಮಾರ್ಗವಾಗಿ ಕಟಪಾಡಿ- ಶಿರ್ವಾ -ಬೆಳ್ಳಣ್​ -ಪಡುಬಿದ್ರಿ ಮಾರ್ಗವಾಗಿ ಸಂಚರಿಸಬೇಕು. ಉಡುಪಿ ಕಡೆಯಿಂದ ಬಜ್ಪೆ ಏರ್​ಪೋರ್ಟ್​ ಹೋಗುವ ವಾಹನಗಳು ಕಟಪಾಡಿ -ಶಿರ್ವಾ -ಬೆಳ್ಳಣ್​ -ಮುಂಡ್ಕೂರು ಮಾರ್ಗವಾಗಿ ಸಂಚರಿಸಬೇಕು. ಟ್ರಕ್​, ಲಾರಿ, ಟ್ಯಾಂಕರ್​ ಮುಂತಾದ ಘನ ವಾಹನಗಳನ್ನು ರಾತ್ರಿ 9 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್​ ಬೇಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರಿಸಬೇಕು.
ಉಡುಪಿಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪುಯಾಣಿಕ ಬಸ್ಸುಗಳು ರಾತ್ರಿ 9 ಗಂಟೆ ನಂತರ ಉಡುಪಿಯಿಂದ ಸಂಚರಿಸಬೇಕು. ಮಂಗಳೂರು&-ಉಡುಪಿ ಮಾರ್ಗವಾಗಿ ಸಾಗುವ ಘನ ವಾಹನಗಳಿಗೆ ಸಾಯಂಕಾಲ 5 ರಿಂದ ರಾತ್ರಿ 10 ಗಂಟೆವರೆಗೆ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here