ಶಾಸಕ ಯಶ್ಪಾಲ್ ಸುವರ್ಣ ಸೂಚನೆಯಂತೆ ಅಗತ್ಯ ಸೌಕರ್ಯಗಳ ಅಭಿವೃದ್ಧಿ ಕಾರ್ಯ ಆರಂಭ

ಉಡುಪಿ : ಉಡುಪಿ ನಗರದ ಪ್ರಮುಖ ಸಾರಿಗೆ ಕೇಂದ್ರವಾಗಿರುವ ಸಿಟಿ ಬಸ್ ನಿಲ್ದಾಣದ ಮೇಲ್ಛಾವಣಿ ದುರಸ್ತಿ ಹಾಗೂ ಪ್ರಯಾಣಿಕರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸುವ ತುರ್ತು ಕಾಮಗಾರಿಗೆ ಇಂದಿನಿಂದ ಚಾಲನೆ ನೀಡಲಾಗಿದೆ.
ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅವರ ಸೂಚನೆಯ ಮೇರೆಗೆ ಈ ಕಾಮಗಾರಿಗಳು ಆರಂಭಗೊಂಡಿದ್ದು, ಮಳೆಗಾಲದಲ್ಲಿ ಪ್ರಯಾಣಿಕರು ಎದುರಿಸುತ್ತಿದ್ದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶ ಹೊಂದಿದೆ.
ಬಸ್ ನಿಲ್ದಾಣದ ಮೇಲ್ಛಾವಣಿಯ ದುರಸ್ತಿ, ಸೋರಿಕೆ ತಡೆ, ಸುರಕ್ಷತಾ ಕ್ರಮಗಳು ಹಾಗೂ ಇತರೆ ಅಗತ್ಯ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಮಳೆಗಾಲದ ಸಂದರ್ಭದಲ್ಲಿ ಸಾವಿರಾರು ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ತೊಂದರೆ ಅನುಭವಿಸುತ್ತಿದ್ದ ಹಿನ್ನೆಲೆಯಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ದೊರೆಯುವ ನಿರೀಕ್ಷೆಯಿದೆ.

