ಶಿರ್ವ ಹಿಂದೂ ಜೂನಿಯರ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕ್ಯಾಂಟೀನ್ ಯೋಜನೆಗೆ ಮಹತ್ತರ ಕೊಡುಗೆ ನೀಡಿದ ಕೊಡುಗೈ ದಾನಿ, ಶಿರ್ವ ಪರಿಸರದ ಸಾಮಾಜಿಕ ಅಗತ್ಯತೆಗಳಾದ ಶಿರ್ವ ಬಸ್ ತಂಗುದಾಣ ನಿರ್ಮಾಣ, ಶಿರ್ವ ಹೈಮಾಸ್ಟ್ ದೀಪ ಮುಂತಾದ ಮಹತ್ತರ ಯೋಜನೆಗಳಿಗೆ ಸಹಾಯ ಹಸ್ತ ಚಾಚಿರುವ ಜೊತೆಗೆ ಹಲವಾರು ದೈವಸ್ಥಾನ, ದೇವಸ್ಥಾನಗಳ ಅಭಿವೃದ್ಧಿ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಹಿರಿಯ ಪ್ರಗತಿ ಪರ ಕೃಷಿಕ, ಉದ್ಯಮಿ ಶಿರ್ವ ಅಟ್ಟಿoಜೆ ಶಂಭು ಶೆಟ್ಟಿ(90 ವರ್ಷ) ಅವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಂಘ-ಸಂಸ್ಥೆಗಳ ಕೊಡುಗೈ ದಾನಿ ಹಾಗೂ ಸಾಮಾಜಿಕ ಕಳಕಳಿಯ ಸಹಿತ ಜನಪರ ಕಾಳಜಿ ಹೊಂದಿದ್ದ ಪ್ರಗತಿ ಪರ ಕೃಷಿಕ ಅಟ್ಟಿoಜೆ ಶಂಭು ಶೆಟ್ಟಿ ಅವರ ಅಗಲುವಿಕೆ ಸಮಾಜಕ್ಕೆ ತುಂಬಲಾರದ ನಷ್ಟವೆನಿಸಿದೆ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಪತ್ನಿ ಮತ್ತು ಮಕ್ಕಳಿಗೆ ಅವರ ಆಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

