ಕಾರ್ಕಳ ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಂಸ್ಕಾರ , ಸಂಸ್ಕೃತಿಯ ತಳಹದಿಯ ಮೇಲೆ ಭಾರತೀಯ ಚಿಂತನೆವುಳ್ಳ ಶಿಕ್ಷಣವನ್ನು ನೀಡುತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಯನ್ನು ಮಾಡುತ್ತ ಹೆಸರುವಾಸಿಯಾಗಿರುವ ಹೆಬ್ರಿಯ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿಭಾಗದ ಕನ್ನಡ ಭಾಷಾ ಶಿಕ್ಷಕ ಮಹೇಶ್ ಹೈಕಾಡಿ ಯವರಿಗೆ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಲಭಿಸಿದೆ .
2012 ರಿಂದ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತ ಶಾಲೆಯ ವಿವಿಧ ಚಟುವಟಿಕೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ. ಪ್ರಾರಂಭದಲ್ಲಿ ಭಾಷಾ ಶಿಕ್ಷಕರಾಗಿ ಅನಂತರ ಅಮೃತಭಾರತಿ ಕನ್ನಡ ಮಾಧ್ಯಮ ಪ್ರೌಢಶಾಲೆ ವಿಭಾಗದ ಮುಖ್ಯೋಪಾಧ್ಯಾಯರಾಗಿ ಜವಾಬ್ದಾರಿಯನ್ನು ಸಲ್ಲಿಸಿದ್ದಾರೆ . ಶಾಲೆಯಿಂದ ಮನೆಗೊಂದು ಪತ್ರಿಕೆ ಅಮೃತವಾಣಿ ಹಸ್ತಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿ 2013 ರಿಂದ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ .
2015 – 16 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಮತ್ತು ತೃತೀಯ ಭಾಷೆ ಕನ್ನಡದಲ್ಲಿ ವಿದ್ಯಾರ್ಥಿಗಳು ಗರಿಷ್ಠ ಸರಾಸರಿ ಅಂಕವನ್ನು ದಾಖಲಿಸಿರುತ್ತಾರೆ. 2015-16 ನೇ ಸಾಲಿನ ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಥಮ ಮತ್ತು ತೃತೀಯ ಭಾಷೆ ಕನ್ನಡದಲ್ಲಿ ಗರಿಷ್ಠ ಸರಾಸರಿ
ಅಮೃತ ಭಾರತಿ ಕನ್ನಡಭಾಷಾ ಶಿಕ್ಷಕ ಮಹೇಶ ಹೈಕಾಡಿ ಇವರಿಗೆ ಉಡುಪಿ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ.
RELATED ARTICLES