ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಪಂದ್ಯಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ‘ಸಮಗ್ರ ಪ್ರಶಸ್ತಿ’ ಪಡೆದ ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್

0
28

ಉಡುಪಿ: ಜೂನ್ 17ರಿಂದ 21ರ ತನಕ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕಿಕ್ ಬಾಕ್ಸಿಂಗ್ ಪಂದ್ಯಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿರುವ ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆದಿದೆ.

ತಂಡದ ಆವನಿ ಎಸ್. ರಾವ್ ಹಾಗೂ ಧನುಷ್ ಶೆಟ್ಟಿ ಅವರು ಚಿನ್ನದ ಪದಕವನ್ನು ಪಡೆದು ಇಟೆಲಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಪಂದ್ಯಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಮಟ್ಟದ ಪಂದ್ಯಾಕೂಟದಲ್ಲಿ ಭಾಗವಹಿಸಿ 2 ಚಿನ್ನದ ಪದಕ ಮತ್ತು 17 ಕಂಚಿನ ಪದಕ ವಿಜೇತರಾದ ಕಿಕ್ ಬಾಕ್ಸಿಂಗ್ ಪಟುಗಳಿಗೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಹಾಗೂ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ ಗೌರವಾಧ್ಯಕ್ಷ ಡಾ! ನಿ. ಬೀ. ವಿಜಯ ಬಲ್ಲಾಳ್ ಅವರು ದೇವಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಶೀರ್ವದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ ಗೌರವ ಸಲಹೆಗಾರ ಶಿವಕುಮಾರ್ ಅಂಬಲಪಾಡಿ, ಅಸೋಸಿಯೇಷನ್ ಜಿಲ್ಲಾಧ್ಯಕ್ಷ ವಾಮನ್ ಪಾಲನ್, ಪ್ರಧಾನ ಕಾರ್ಯದರ್ಶಿ ರವಿ ಸಾಲ್ಯಾನ್, ಉಪಾಧ್ಯಕ್ಷ ಅಶೋಕ್ ಕುಲಾಲ್, ಜೊತೆ ಕಾರ್ಯದರ್ಶಿಗಳಾದ ಮೇಘಾ, ಸೂರಜ್, ತಾಂತ್ರಿಕ ನಿರ್ದೇಶಕ ಪವನ್ ಕುಮಾರ್, ಶಿಕ್ಷಕರಾದ ವರದರಾಜ್, ಅಮೃತ ಉಪಸ್ಥಿತರಿದ್ದರು.

ಪವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here