ಉಡುಪಿಯ ಹಿರಿಯಡ್ಕದ ಶೀರೂರು ಮೂಲ ಮಠದಲ್ಲಿ ರಾಮ ನವಮಿಯನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರಿಂದ ಸಂಸ್ಥಾನ ಪೂಜೆಯು ನಡೆಯಿತು. ವಿಷ್ಣುಸಹಸ್ರನಾಮ ಪಾರಾಯಣವನ್ನು ಮಾಡಲಾಯಿತು.
ಆಂಜನೇಯ ದೇವರಿಗೆ ವಿಶೇಷ ಪೂಜೆಯನ್ನು ಮಾಡಲಾಯಿತು. ನಂತರ ಪಲ್ಲಪೂಜೆಯನ್ನು ಮಾಡಿ ಮಹಾ ಅನ್ನಸಂತರ್ಪಣೆಯನ್ನು ಮಾಡಲಾಯಿತು. ಶೀರೂರು ಮಠದ ದಿವಾನರಾದ ಡಾl ಉದಯಕುಮಾರ ಸರಳತ್ತಾಯ ಉಪಸ್ಥಿತರಿದ್ದರು.

