Monday, March 17, 2025
Homeಉಡುಪಿಉಡುಪಿ: ಖ್ಯಾತ ಪತ್ರಕರ್ತ, ಚಿಂತಕ ವಿ.ಟಿ ರಾಜಶೇಖರ್ ನಿಧನ

ಉಡುಪಿ: ಖ್ಯಾತ ಪತ್ರಕರ್ತ, ಚಿಂತಕ ವಿ.ಟಿ ರಾಜಶೇಖರ್ ನಿಧನ

ಉಡುಪಿ: ಖ್ಯಾತ ಪತ್ರಕರ್ತ, ಲೇಖಕ, ಚಿಂತಕ ಹಾಗು ದಲಿತ್ ವಾಯ್ಸ್ ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ ಅವರು ನ.20 ಬುಧವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೆಲವು ವರ್ಷಗಳಿಂದ ಮಂಗಳೂರಿನ ಶಿವಭಾಗ್ ನಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದ ಅವರು ಇತ್ತೀಚಿಗೆ ಅಸೌಖ್ಯದಿಂದ ಬಳಲುತ್ತಿದ್ದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.

ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ಅವರು ಬಳಿಕ ದಲಿತರ ಧ್ವನಿಯಾಗಿ ಕೆಲಸ ಮಾಡಲು 1981 ರಲ್ಲಿ ದಲಿತ್ ವಾಯ್ಸ್ ನಿಯತಕಾಲಿಕ ಪ್ರಾರಂಭಿಸಿದ್ದರು. ದೇಶಾದ್ಯಂತ ದಲಿತ್ ವಾಯ್ಸ್ ಹಾಗು ಅದರಲ್ಲಿ ಪ್ರಕಟಿತ ಅವರ ಬರಹಗಳು ಭಾರೀ ಚರ್ಚೆಗೆ ಕಾರಣವಾಗುತ್ತಿದ್ದವು.

ಮೀಸಲಾತಿ ಹಾಗು ದಲಿತರ ಹಕ್ಕುಗಳ ಪ್ರಬಲ ಪ್ರತಿಪಾದಕರಾಗಿದ್ದ ರಾಜಶೇಖರ್ ಅವರು ಬ್ರಾಹ್ಮಣ್ಯ ಹಾಗು ಸಂಘ ಪರಿವಾರದ ಕಟು ಟೀಕಾಕಾರರಾಗಿದ್ದರು. ಹತ್ತಾರು ಮಹತ್ವದ ಕೃತಿಗಳನ್ನು ರಚಿಸಿರುವ ವಿ.ಟಿ ರಾಜಶೇಖರ್ ಅವರು ರಾಷ್ಟ್ರೀಯ, ಅಂತರ್ ರಾಷ್ಟ್ರೀಯ ಪ್ರಶಸ್ತಿ, ಗೌರವಗಳಿಗೆ ಪಾತ್ರರಾಗಿದ್ದಾರೆ.

ರಾಜಶೇಖರ್ ಅವರ ಪತ್ನಿ ಈ ಹಿಂದೆಯೇ ನಿಧನರಾಗಿದ್ದು, ಪುತ್ರ ಸಲೀಲ್ ಶೆಟ್ಟಿ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ರಾಜಶೇಖರ್ ಅವರ ಅಂತಿಮ ಸಂಸ್ಕಾರ ಉಡುಪಿಯ ಓಂತಿಬೆಟ್ಟುವಿನಲ್ಲಿ ನ.21 ಗುರುವಾರ ನಡೆಯಲಿದೆ.

RELATED ARTICLES
- Advertisment -
Google search engine

Most Popular