ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

0
45

ಉಡುಪಿ : ಕನ್ನಡ ಭಾಷೆಗೆ 3 ಸಾವಿರ ವರ್ಷಗಳ ಇತಿಹಾಸವಿದೆ. ವೈವಿಧ್ಯಮಯ ಸಾಹಿತ್ಯ ಕನ್ನಡದಲ್ಲಿದೆ. ಇಂಗ್ಲಿಷ್​ ಪ್ರಭಾವದಿಂದ ಹೊಸ ಕನ್ನಡ ಸಾಹಿತ್ಯ ಬೆಳೆದಿದೆ. ಕನ್ನಡ ಸಾಹಿತ್ಯಕ್ಕೆ 8 ಜ್ಞಾನಪೀಠ ಪ್ರಶಸ್ತಿ, ಬೂಕರ್​ ಪ್ರಶಸ್ತಿ ಲಭಿಸಿದ್ದು, ಕನ್ನಡ ಜಾಗತಿಕ ಮಟ್ಟದಲ್ಲಿ ಬೆಳೆಯುತ್ತಿದೆ. ಆದರೆ ಕನ್ನಡವನ್ನು ಉಳಿಸುವಲ್ಲಿ ರಾಜ್ಯ ಸರ್ಕಾರಗಳು ಸೋತಿವೆ. ಸಂ&ಸಂಸ್ಥೆಗಳು, ಸಾಹಿತ್ಯ ಪರಿಷತ್​ ಮಾತ್ರ ಕನ್ನಡ ಭಾಷೆ ಉಳಿವಿಗೆ ಕೊಡುಗೆ ನೀಡುತ್ತಿವೆ ಎಂದು ಆಳ್ವಾಸ್​ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಡಾ. ಮೋಹನ್​ ಆಳ್ವಾ ಹೇಳಿದರು.

ಯಕ್ಷಗಾನ ಕಲಾರಂಗ ಸಭಾಂಗಣದಲ್ಲಿ ನಡೆದ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಭೀಷ್ಮೋತ್ಸವ ಉದ್ಘಾಟಿಸಿ ಮಾತನಾಡಿದರು. ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವಲ್ಲಿ ಸರ್ಕಾರ ಸಂಪೂರ್ಣ ಸೋತು ಹೋಗಿದೆ. ಶಾಲೆಗಳಲ್ಲಿ ಶಿಕ್ಷಕರಿಲ್ಲ. ಮೂಲ ಸೌಕರ್ಯಗಳಿಲ್ಲದೆ ಸೊರಗುತ್ತಿವೆ. ಪರಿವರ್ತನೆ ಕಾಲಟ್ಟದಲ್ಲಿ ಕನ್ನಡ ಶಾಲೆಗಳನ್ನು ನಡೆಸುವುದೇ ದುಸ್ತರವಾಗಿದೆ. ಕನ್ನಡವನ್ನು ಕಾಯಬೇಕಾದ ಸರ್ಕಾರವೇ ಸೋತರೆ ಕನ್ನಡ ಉಳಿವು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಮಾತನಾಡಿದರು.

ಹಿರಿಯ ಯಕ್ಷಗಾನ ಕಲಾವಿದ ಹಾಗೂ ಸಾಹಿತಿ ಡಾ. ಭಾಸ್ಕರಾನಂದ ಕುಮಾರ್​ ಸಮ್ಮೇಳನಾಧ್ಯಕ್ಷತೆ ವಹಿಸಿದ್ದರು. ಡಾ. ನಳಿನಿ ಭಾಸ್ಕರಾನಂದ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಪ್ರೊ. ಎಂ.ಎಲ್​. ಸಾಮಗ, ಉದ್ಯಮಿ ವಿಶ್ವನಾಥ ಶೆಣೈ, ಡಿಡಿಪಿಐ ಮಾರುತಿ, ಕಸಾಪ ಗೌರವ ಸಲಹೆಗಾರ ಭುವನಪ್ರಸಾದ್​ ಹೆಗಡೆ, ಕರ್ನಾಟಕ ಬ್ಯಾಂಕ್​ ಎಜಿಎಂ ರಮೇಶ್​ ವೈದ್ಯ, ರಂಜನಿ ವಸಂತ್​, ರಾಜೇಶ್​ ಭಟ್​ ಪಣಿಯಾಡಿ, ಇಂದ್ರಾಳಿ ಜಯಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್​ ಎಚ್​.ಪಿ. ಪ್ರಸ್ತಾವಿಕವಾಗಿ ಮಾತನಾಡಿದರು. ಸತೀಶ್​ ಕೊಡವೂರು ಸ್ವಾಗತಿಸಿ, ಪೂರ್ಣಿಮಾ ಜನಾರ್ದನ್​ ಕಾರ್ಯಕ್ರಮ ನಿರೂಪಿಸಿದರು, ಜನಾರ್ದನ್​ ಕೊಡವೂರು ವಂದಿಸಿದರು.

ವಿವಿಧ ಕ್ಷೇತ್ರದ ಸಾಧಕರಾದ ತಿಲಕನಾಥ್​ ಮಂಜೇಶ್ವರ , ಗೋಪಾಲ್​ ಭಟ್​ ಎಂ, ವಿಮಲಾ ಚಂದ್ರಶೇಖರ್​, ಮರವಂತೆ ನಾಗರಾಜ್​ ಹೆಬ್ಬಾರ್​, ಕೆ.ರಂಜನ್​ , ಲಕ್ಷಿ$್ಮ ಹರಿಶ್ಚಂದ್ರ, ಅ. ರಾ. ಪ್ರಭಾಕರ್​ ಪೂಜಾರಿ, ವಿಘ್ನೇಶ್ವರ ಅಡಿಗ, ಪಿ.ಎಂ. ವೇಣು ಗೋಪಾಲ್​ ಹೆಬ್ಬಾರ್​, ಶ್ರೀಕಾಂತ್​ ಭಟ್​, ವಿದ್ಯಾಲತಾ ಯು. ಶೆಟ್ಟಿ ಇವರಿಗೆ ಕಸಾಪ ಉಡುಪಿ ತಾಲೂಕು ಗೌರವ ಪುರಸ್ಕಾರ ನೀಡಿ ಗೌರವಿಸಲಾಯಿತು. ಉಡುಪಿ ತಾಲೂಕಿನ ಎಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ಸುಮಾರು 50 ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಭಾಕಾರ್ಯಕ್ರಮಕ್ಕೂ ಮುನ್ನ ಶಾರದಾ ಮಂಟಪದಿಂದ ವೇದಿಕೆವರೆಗೆ ಕನ್ನಡಾಭಿಮಾನಿಗಳ ಮೆರವಣಿಗೆ ನಡೆಯಿತು.

ಚಿತ್ರ ಕಲಾವಿದರಾದ ಆಸ್ಟ್ರೊಮೋಹನ್​ ಹಾಗೂ ಜನಾರ್ದನ ಕೊಡವೂರು ಸಂಪಾದಿತ ‘ಚಿತ್ರಮಯ ಉಡುಪಿ’ ಪ್ರದರ್ಶನ ಹಾಗೂ ನಿತ್ಯಾನಂದ ನಾಯಕ್​ ಅವರ ಮುರಲ್​ ಕಲಾಕೃತಿಗಳ ಪ್ರದರ್ಶನ ಉದ್ಘಾಟಿಸಲಾಯಿತು.

LEAVE A REPLY

Please enter your comment!
Please enter your name here