ಉಪ್ಪಿನಂಗಡಿ : ವಿಶ್ವ ಕರ್ಮ ಸಮಾಜ ಸೇವಾ ಸಂಘ(ರಿ.) ಉಪ್ಪಿನಂಗಡಿ ಇದರ ವತಿಯಿಂದ ಇತ್ತೀಚೆಗೆ ಕಲಾ ಕ್ಷೇತ್ರದಲ್ಲಿ ಸುದೀರ್ಘ ಸಾಧನೆ ಮಾಡಿರುವ ದಯಾನಂದ ಆಚಾರ್ಯ ನೆಲ್ಯಾಡಿ ಇವರನ್ನು 29ನೇ ವರುಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವದ ಸಂದರ್ಭದಲ್ಲಿ ರಂಗ ಶ್ರಮಿಕ ಎಂಬ ಬಿರುದನ್ನಿತ್ತು ಗೌರವಿಸಲಾಯಿತು. ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಸರ್ವ ಸದಸ್ಯರು, ಸ್ವಜಾತಿ ಬಾಂಧವರು ಉಪಸ್ಥಿತರಿದ್ದರು.
ಉಪ್ಪಿನಂಗಡಿ: 29ನೇ ವರುಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ
RELATED ARTICLES