ಯುವ ವಾಹಿನಿ (ರಿ) ಮೂಲ್ಕಿ ಘಟಕದ ಆಶ್ರಯದಲ್ಲಿ ದ. ಕ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆ ಕಕ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ ವಿನಯ ಕುಮಾರ್ ಮಟ್ಟು ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಕಕ್ವ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ನಿರ್ಮಲಾ ಎನ್ ನಾಯಕ್ ರವರು ಮಾತನಾಡಿ ಇಂದಿನ ಪೀಳಿಗೆ ಪರಿಸರ ರಕ್ಷಣೆ ಮಾಡಿದ್ದಲ್ಲಿ ಪರಿಸರ ನಮ್ಮನ್ನು ರಕ್ಷಿಸುತ್ತದೆ ಎಂದು ಹೇಳಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಪೊಲೀಸ್ ನಿರೀಕ್ಷಕರು ಕೆ ಎನ್ ಕೋಟ್ಯಾನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಪ್ರದೀಪ್ ಎಸ್ ಕೋಟ್ಯಾನ್ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಬಬಿತಾ ಸುವರ್ಣ ,ರವೀಶ್ ಕಾಮತ್ ಕಕ್ವ, ಪ್ರತ್ವೀಕ್ ಕೋಟ್ಯಾನ್ ಉಪಸ್ಥಿತರಿದ್ದರು.

ವಿನಯ್ ಕುಮಾರ್ ಸ್ವಾಗತಿಸಿದರು. ಕು.ಪ್ರೇರಣಾ ಧನ್ಯವಾದ ನೀಡಿದರು. ಪ್ರೀತಿಕಾ ಡಿ ಕಾರ್ಯಕ್ರಮ ನಿರೂಪಿಸಿದರು.