ಮುಂದಿನ 7 ದಿನ ವರುಣನ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..!

0
21

ಮಂಗಳೂರು : ನೈಋತ್ಯ ಮುಂಗಾರು ರಾಜ್ಯಾದ್ಯಂತ ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿ ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಅತಿ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಇದೇ ವೇಳೆ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಹಾಗೂ ರಾಮನಗರ ಜಿಲ್ಲೆಗಳಲ್ಲಿಯೂ ಮಳೆಯ ವಾತಾವರಣ ಮುಂದುವರಿಯಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ತಾಪಮಾನದಲ್ಲಿ ಇಳಿಕೆ ಕಂಡುಬರಲಿದೆ.

ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಹಾಗೂ ಮೀನುಗಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

LEAVE A REPLY

Please enter your comment!
Please enter your name here