ಯಕ್ಷಗಾನ ರಂಗದ ‘ದಶಾವತಾರಿ’ ಎಂದೇ ಪ್ರಖ್ಯಾತರಾಗಿದ್ದ ತೆಂಕುತಿಟ್ಟಿನ ಅಪ್ರತಿಮ ಹಾಗೂ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್ (88) ಅವರು ಶುಕ್ರವಾರ ರಾತ್ರಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಹೆದ್ದೂರಿನಲ್ಲಿರುವ ತಮ್ಮ ಹಿರಿಯ ಪುತ್ರನ ನಿವಾಸದಲ್ಲಿ ಶುಕ್ರವಾರ ರಾತ್ರಿ 9.10ರ ಸುಮಾರಿಗೆ ಕೊನೆಯುಸಿರೆಳೆದರು.

